ಜನರಲ್ ಮೆಡಿಸಿನ್, ಪಬ್ಲಿಕ್ ಹೆಲ್ತ್ ಮೆಡಿಸಿನ್ ಮತ್ತು ಮ್ಯಾನೇಜ್ಮೆಂಟ್ ಎಂಬ ಮೂರು ಕ್ಷೇತ್ರಗಳಲ್ಲಿ ಸ್ನಾತಕೋತ್ತರ ಅರ್ಹತೆಗಳನ್ನು ಹೊಂದಿರುವ ವೈದ್ಯ ಎಂಬ ವಿಶೇಷ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಪ್ರಸ್ತುತ ಅವರು ವೆಲ್ಲೂರಿನ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿನ (ಸಿಎಂಸಿ) ಮಂಡಳಿ ಮತ್ತು ಕಾರ್ಯಕಾರಿ ಸಮಿತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ರೋಟರಿ ಕ್ಲಬ್ ಆಫ್ ಮಂಗಳೂರಿನ ಸದಸ್ಯರಾಗಿದ್ದಾರೆ. ಈ ಹಿಂದೆ ಅವರು ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಉಪಾಧ್ಯಕ್ಷ, ಅದರ ಬ್ಲಡ್ ಬ್ಯಾಂಕ್ ಸಮಿತಿಯ ಅಧ್ಯಕ್ಷ ಆಗಿದ್ದರು. ಕರ್ನಾಟಕ ಅಂತರ ಡಯೋಸಿಸ್ ವೈದ್ಯಕೀಯ ಮಂಡಳಿಯ ಕಾರ್ಯದರ್ಶಿಯಾಗಿ , ಸಿಎಸ್ಐ ಸಿನೋಡ್ ನ ವೈದ್ಯಕೀಯ ಮಂಡಳಿಯ ಸಂಯೋಜಕರಾಗಿದ್ದರು.