ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನೌಕರರ ಸಂಘದ ಅಧ್ಯಕ್ಷ ನರಸಿಂಹ ನಾಯಕ್, ಚಾಲಕರು ಸೇರಿದಂತೆ ಆರೋಗ್ಯ ಕವಚ ಯೋಜನೆಯಲ್ಲಿ ರಾಜ್ಯದಲ್ಲಿ ಸುಮಾರು 4 ಸಾವಿರ ಸಿಬ್ಬಂದಿ ಇದ್ದು ಮೂರು ತಿಂಗಳಿಂದ ವೇತನ ಇಲ್ಲದೇ ಕೆಲಸ ಮಾಡುತ್ತಿದ್ದಾರೆ. ನಮ್ಮಲ್ಲಿ ಬಹುತೇಕರು ಬೇರೆ ಊರುಗಳಿಂದ ಬಂದವರು. ಮೂರು ತಿಂಗಳಿಂದ ಮನೆ ಬಾಡಿಗೆ ಕಟ್ಟಲು ಸಾಧ್ಯವಾಗಲಿಲ್ಲ. ಮಕ್ಕಳ ಶಾಲಾ ಶುಲ್ಕ ಭರಿಸುವುದು ಕೂಡ ಕಷ್ಟಕರವಾಗಿದೆ ಎಂದರು.