ಉತ್ತರಪ್ರದೇಶದ ದಂಪತಿ ಪುತ್ರ ಕೃಷ್ಣ (5) ಗಾಯಗೊಂಡಿರುವ ಮಗು. ಪಾಲಕರ ಜೊತೆಗೆ ರಸ್ತೆ ದಾಟುವ ಸಂದರ್ಭದಲ್ಲಿ ತೊಕ್ಕೊಟ್ಟು ಕಡೆಯಿಂದ ಉಳ್ಳಾಲದತ್ತ ನೀರು ಸರಬರಾಜು ಮಾಡುತ್ತಿದ್ದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಮಗುವಿನ ಹೊಟ್ಟೆ ಹಾಗೂ ಕೈಯ ಮೇಲೆ ಟ್ಯಾಂಕರ್ ಹರಿದಿರುವುದರಿಂದ ಸ್ಥಿತಿ ಗಂಭೀರವಾಗಿದೆ. ನಾಗುರಿ ಸಂಚಾರಿ ಠಾಣಾ ಪೊಲೀಸರು ಟ್ಯಾಂಕರ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಆತನನ್ನು ವಶಕ್ಕೆ ಪಡೆದಿದ್ದಾರೆ.