<p><strong>ಮಂಗಳೂರು</strong>: ಪ್ರಯಾಣಿಕರ ಕೊರತೆಯಿಂದಾಗಿ ವಾರದಲ್ಲಿ ನಾಲ್ಕು ದಿನ ಸಂಚರಿಸುತ್ತಿದ್ದ ಕೆಎಸ್ಆರ್ ಬೆಂಗಳೂರು–ಮಂಗಳೂರು ಸೆಂಟ್ರಲ್– ಕೆಎಸ್ಆರ್ ಬೆಂಗಳೂರು (ರೈ.ಸಂ. 06515/06516) ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.</p>.<p>ಕುಣಿಗಲ್, ಶ್ರವಣಬೆಳಗೂಳ ಮಾರ್ಗವಾಗಿ ಇತ್ತೀಚೆಗಷ್ಟೇ ಆರಂಭವಾಗಿದ್ದ ಈ ರೈಲಿನಲ್ಲಿ ಪ್ರಯಾಣಿಕರ ಸಂಖ್ಯೆ ಅತ್ಯಂತ ಕಡಿಮೆಯಾಗಿತ್ತು. ಇದೀಗ ಈ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.</p>.<p>ಬೆಂಗಳೂರಿನಿಂದ ಮಂಗಳೂರಿಗೆ ಹೊರಡುವ ರೈಲು ಸಂಚಾರವನ್ನು ಇದೇ 7 ರಿಂದ ಹಾಗೂ ಮಂಗಳೂರು ಸೆಂಟ್ರಲ್ನಿಂದ ಬೆಂಗಳೂರಿಗೆ ಹೊರಡುವ ರೈಲು ಸಂಚಾರ ಇದೇ 11 ರಿಂದ ರದ್ದುಗೊಳಿಸಲಾಗಿದೆ.</p>.<p>ಮೈಸೂರು ಮಾರ್ಗವಾಗಿ ವಾರದಲ್ಲಿ ಮೂರು ದಿನ ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ರೈಲಿನ ವೇಳಾಪಟ್ಟಿಯನ್ನೂ ಪರಿಷ್ಕರಿಸಲಾಗಿದೆ.</p>.<p>ಕೆಎಸ್ಆರ್ ಬೆಂಗಳೂರು– ಮಂಗಳೂರು ಸೆಂಟ್ರಲ್ (ರೈ.ಸಂ. 06517) ರೈಲು ಇದೇ 7 ರಿಂದ ಪ್ರತಿ ಬುಧವಾರ, ಶುಕ್ರವಾರ ಹಾಗೂ ಭಾನುವಾರ ಸಂಚರಿಸಲಿದೆ. ಈ ಮೊದಲು ಈ ರೈಲು ಭಾನುವಾರ, ಸೋಮವಾರ, ಮಂಗಳವಾರ ಸಂಚರಿಸುತ್ತಿತ್ತು.</p>.<p>ಮಂಗಳೂರು ಸೆಂಟ್ರಲ್– ಕೆಎಸ್ಆರ್ ಬೆಂಗಳೂರು (ರೈ.ಸಂ 06518) ರೈಲು ಇದೇ 8 ರಿಂದ ಗುರುವಾರ, ಶನಿವಾರ ಹಾಗೂ ಸೋಮವಾರ ಸಂಚರಿಸಲಿದೆ. ಈ ಮೊದಲು ಗುರುವಾರ, ಶುಕ್ರವಾರ ಹಾಗೂ ಶನಿವಾರ ರೈಲು ಸಂಚಾರ ಮಾಡುತ್ತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಪ್ರಯಾಣಿಕರ ಕೊರತೆಯಿಂದಾಗಿ ವಾರದಲ್ಲಿ ನಾಲ್ಕು ದಿನ ಸಂಚರಿಸುತ್ತಿದ್ದ ಕೆಎಸ್ಆರ್ ಬೆಂಗಳೂರು–ಮಂಗಳೂರು ಸೆಂಟ್ರಲ್– ಕೆಎಸ್ಆರ್ ಬೆಂಗಳೂರು (ರೈ.ಸಂ. 06515/06516) ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.</p>.<p>ಕುಣಿಗಲ್, ಶ್ರವಣಬೆಳಗೂಳ ಮಾರ್ಗವಾಗಿ ಇತ್ತೀಚೆಗಷ್ಟೇ ಆರಂಭವಾಗಿದ್ದ ಈ ರೈಲಿನಲ್ಲಿ ಪ್ರಯಾಣಿಕರ ಸಂಖ್ಯೆ ಅತ್ಯಂತ ಕಡಿಮೆಯಾಗಿತ್ತು. ಇದೀಗ ಈ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.</p>.<p>ಬೆಂಗಳೂರಿನಿಂದ ಮಂಗಳೂರಿಗೆ ಹೊರಡುವ ರೈಲು ಸಂಚಾರವನ್ನು ಇದೇ 7 ರಿಂದ ಹಾಗೂ ಮಂಗಳೂರು ಸೆಂಟ್ರಲ್ನಿಂದ ಬೆಂಗಳೂರಿಗೆ ಹೊರಡುವ ರೈಲು ಸಂಚಾರ ಇದೇ 11 ರಿಂದ ರದ್ದುಗೊಳಿಸಲಾಗಿದೆ.</p>.<p>ಮೈಸೂರು ಮಾರ್ಗವಾಗಿ ವಾರದಲ್ಲಿ ಮೂರು ದಿನ ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ರೈಲಿನ ವೇಳಾಪಟ್ಟಿಯನ್ನೂ ಪರಿಷ್ಕರಿಸಲಾಗಿದೆ.</p>.<p>ಕೆಎಸ್ಆರ್ ಬೆಂಗಳೂರು– ಮಂಗಳೂರು ಸೆಂಟ್ರಲ್ (ರೈ.ಸಂ. 06517) ರೈಲು ಇದೇ 7 ರಿಂದ ಪ್ರತಿ ಬುಧವಾರ, ಶುಕ್ರವಾರ ಹಾಗೂ ಭಾನುವಾರ ಸಂಚರಿಸಲಿದೆ. ಈ ಮೊದಲು ಈ ರೈಲು ಭಾನುವಾರ, ಸೋಮವಾರ, ಮಂಗಳವಾರ ಸಂಚರಿಸುತ್ತಿತ್ತು.</p>.<p>ಮಂಗಳೂರು ಸೆಂಟ್ರಲ್– ಕೆಎಸ್ಆರ್ ಬೆಂಗಳೂರು (ರೈ.ಸಂ 06518) ರೈಲು ಇದೇ 8 ರಿಂದ ಗುರುವಾರ, ಶನಿವಾರ ಹಾಗೂ ಸೋಮವಾರ ಸಂಚರಿಸಲಿದೆ. ಈ ಮೊದಲು ಗುರುವಾರ, ಶುಕ್ರವಾರ ಹಾಗೂ ಶನಿವಾರ ರೈಲು ಸಂಚಾರ ಮಾಡುತ್ತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>