‘ಪ್ರಕೃತಿ ನಮಗೆ ಎಲ್ಲವನ್ನೂ ಕೊಟ್ಟಿದೆ. ಮೂಕಪ್ರಾಣಿಗಳು ಪ್ರಕೃತಿಯನ್ನು ಪೋಷಿಸುತ್ತವೆ. ಆದರೆ, ಮನುಷ್ಯ ದುರಾಸೆಯಿಂದ ಪ್ರಕೃತಿಯನ್ನು ಬೇಕಾಬಿಟ್ಟಿ ಬಳಸಿ ಹಾಳು ಮಾಡುತ್ತಿದ್ದಾನೆ. ಮನುಷ್ಯನನ್ನು ಹೊರತುಪಡಿಸಿ, ನಿಸರ್ಗದಲ್ಲಿ ಸೃಷ್ಟಿಯಾಗುವ ಪ್ರತಿಯೊಂದೂ ನಿಸರ್ಗಕ್ಕೆ ಪೂರಕವಾದುದನ್ನೇ ಕೊಡುತ್ತದೆ. ಮನುಷ್ಯರಾದ ನಾವು ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ’ ಎಂದರು.