<p><strong>ಮಂಗಳೂರು:</strong> ಲೇಖಕ ಸಜಿ ಎಂ. ನರಿಕುಂಞ ಅವರ ‘ವಾಕ್’ ಮಲೆಯಾಳ ಕೃತಿಯ ಅನುವಾದಿತ ಕನ್ನಡ ಪುಸ್ತಕ ‘ಮಾತು ಎಂಬ ವಿಸ್ಮಯ’ವನ್ನು ಧರ್ಮದರ್ಶಿ ಹರಿಕೃಷ್ಣ ಪುನರೂರು ಮಂಗಳವಾರ ಇಲ್ಲಿ ಬಿಡುಗಡೆಗೊಳಿಸಿದರು.</p>.<p>‘ಸಾಹಿತ್ಯ ಕೃತಿಗಳನ್ನು ಖರೀದಿಸಿ ಓದಿದರೆ ಬರಹಗಾರರನ್ನು ಪ್ರೋತ್ಸಾಹಿಸಿದಂತೆ ಆಗುತ್ತದೆ. ಮಕ್ಕಳಲ್ಲಿ ಓದುವ ಆಸಕ್ತಿ ಬೆಳೆಸಬೇಕು. ಕನ್ನಡ ಕೃತಿಗಳನ್ನು ಓದುವ ಹವ್ಯಾಸ ಹೆಚ್ಚಬೇಕು’ ಎಂದರು.</p>.<p>ಅನುವಾದಕಿ ಮೀನಾಕ್ಷಿ ರಾಮಚಂದ್ರ ಮಾತನಾಡಿ, ‘ಮಾತು ಎಂಬ ವಿಸ್ಮಯ’ ಕೃತಿ ಮಾತಿನ ಮಹತ್ವವನ್ನು ತಿಳಿಸುತ್ತದೆ. ಮಾತಿನ ಮೇಲೆ ಹಿಡಿತವಿರಬೇಕು, ಜಾಗರೂಕತೆಯಿಂದ ಮಾತನಾಡಬೇಕು. ಸಂಬಂಧವನ್ನು ಉಳಿಸುವ, ಬೆಳೆಸುವ ಶಕ್ತಿ ಮಾತಿಗೆ ಇದೆ. ಬದುಕನ್ನು ರೂಪಿಸಿಕೊಳ್ಳಲು ಮಾದರಿಯಾಗಿರುವ ಸಂದೇಶ ಈ ಕೃತಿಯಲ್ಲಿದೆ. ಈ ಲೇಖಕರ ಇನ್ನಷ್ಟು ಕೃತಿಗಳನ್ನು ಭಾಷಾಂತರಿಸುವ ಯೋಚನೆ ಇದೆ’ ಎಂದರು.</p>.<p>ಮಂಗಳೂರಿನ ಮೈರುಗ ಪ್ರಕಾಶನ ಕೃತಿಯನ್ನು ಪ್ರಕಟಿಸಿದೆ. ತುಳು ವರ್ಲ್ಡ್ ಫೌಂಡೇಷನ್ ನಿರ್ದೇಶಕ ರಾಜೇಶ್ ಆಳ್ವ ಬದಿಯಡ್ಕ, ಪ್ರಕಾಶಕ ಜಿ.ಕೆ. ಮೈರುಗ ಉಪಸ್ಥಿತರಿದ್ದರು. ರಾಮಚಂದ್ರ ಭಟ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಲೇಖಕ ಸಜಿ ಎಂ. ನರಿಕುಂಞ ಅವರ ‘ವಾಕ್’ ಮಲೆಯಾಳ ಕೃತಿಯ ಅನುವಾದಿತ ಕನ್ನಡ ಪುಸ್ತಕ ‘ಮಾತು ಎಂಬ ವಿಸ್ಮಯ’ವನ್ನು ಧರ್ಮದರ್ಶಿ ಹರಿಕೃಷ್ಣ ಪುನರೂರು ಮಂಗಳವಾರ ಇಲ್ಲಿ ಬಿಡುಗಡೆಗೊಳಿಸಿದರು.</p>.<p>‘ಸಾಹಿತ್ಯ ಕೃತಿಗಳನ್ನು ಖರೀದಿಸಿ ಓದಿದರೆ ಬರಹಗಾರರನ್ನು ಪ್ರೋತ್ಸಾಹಿಸಿದಂತೆ ಆಗುತ್ತದೆ. ಮಕ್ಕಳಲ್ಲಿ ಓದುವ ಆಸಕ್ತಿ ಬೆಳೆಸಬೇಕು. ಕನ್ನಡ ಕೃತಿಗಳನ್ನು ಓದುವ ಹವ್ಯಾಸ ಹೆಚ್ಚಬೇಕು’ ಎಂದರು.</p>.<p>ಅನುವಾದಕಿ ಮೀನಾಕ್ಷಿ ರಾಮಚಂದ್ರ ಮಾತನಾಡಿ, ‘ಮಾತು ಎಂಬ ವಿಸ್ಮಯ’ ಕೃತಿ ಮಾತಿನ ಮಹತ್ವವನ್ನು ತಿಳಿಸುತ್ತದೆ. ಮಾತಿನ ಮೇಲೆ ಹಿಡಿತವಿರಬೇಕು, ಜಾಗರೂಕತೆಯಿಂದ ಮಾತನಾಡಬೇಕು. ಸಂಬಂಧವನ್ನು ಉಳಿಸುವ, ಬೆಳೆಸುವ ಶಕ್ತಿ ಮಾತಿಗೆ ಇದೆ. ಬದುಕನ್ನು ರೂಪಿಸಿಕೊಳ್ಳಲು ಮಾದರಿಯಾಗಿರುವ ಸಂದೇಶ ಈ ಕೃತಿಯಲ್ಲಿದೆ. ಈ ಲೇಖಕರ ಇನ್ನಷ್ಟು ಕೃತಿಗಳನ್ನು ಭಾಷಾಂತರಿಸುವ ಯೋಚನೆ ಇದೆ’ ಎಂದರು.</p>.<p>ಮಂಗಳೂರಿನ ಮೈರುಗ ಪ್ರಕಾಶನ ಕೃತಿಯನ್ನು ಪ್ರಕಟಿಸಿದೆ. ತುಳು ವರ್ಲ್ಡ್ ಫೌಂಡೇಷನ್ ನಿರ್ದೇಶಕ ರಾಜೇಶ್ ಆಳ್ವ ಬದಿಯಡ್ಕ, ಪ್ರಕಾಶಕ ಜಿ.ಕೆ. ಮೈರುಗ ಉಪಸ್ಥಿತರಿದ್ದರು. ರಾಮಚಂದ್ರ ಭಟ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>