ನಗರದ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರಿಗೆ ಈ ಕಾರು ಸೇರಿದ್ದು, ತೊಕ್ಕೊಟ್ಟು ಕಡೆಯಿಂದ ಮಂಗಳೂರಿಗೆ ಬರುತ್ತಿತ್ತು. ಎದುರಿನಿಂದ ವೇಗವಾಗಿ ವಾಹನವೊಂದು ಬಂದಿದ್ದು, ವಾಹನದ ವೇಗಕ್ಕೆ ರಸ್ತೆಯಲ್ಲಿ ನಿಂತಿದ್ದ ಮಳೆನೀರು ವೈದ್ಯರ ಕಾರಿನ ಮುಂಭಾಗದ ಗ್ಲಾಸ್ ಮೇಲೆ ಬಿದ್ದಿದೆ. ಈ ವೇಳೆ ದಾರಿ ಕಾಣದೇ ನಿಯಂತ್ರಣ ತಪ್ಪಿದ ಕಾರು ಸರ್ವಿಸ್ ರಸ್ತೆಗೆ ಜಾರಿದೆ.