ಮೃತ ಸಂದೇಶ್ ಅಥಣಿ ತಾಲ್ಲೂಕಿನ ಶ್ರೀಪತಿ ಶಿಂಧೆ ಮತ್ತು ರಾಜಶ್ರೀ ದಂಪತಿಯ ಪುತ್ರ. ಶ್ರೀಪತಿ ಶಿಂಧೆ ಭೂ ಸೇನೆಯಲ್ಲಿದ್ದು, ಈಗ ಅರುಣಾಚಲ ಪ್ರದೇಶದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮಗನನ್ನು ಕೂಡ ಸೈನಿಕನನ್ನಾಗಿ ಮಾಡುವ ಕನಸಿನೊಂದಿಗೆ ಸೈನಿಕ ಶಾಲೆಗೆ ಸೇರಿಸಲು ಮುಂದಾಗಿದ್ದರು. ಇದಕ್ಕಾಗಿ ಸೈನಿಕ ಶಾಲಾ ಪ್ರವೇಶ ಪರೀಕ್ಷೆ ಎದುರಿಸಲು ಮಗನಿಗೆ ತರಬೇತಿಯನ್ನೂ ಕೊಡಿಸುತ್ತಿದ್ದರು. ಅದರ ನಡುವೆಯೇ ಆತ ಪರೀಕ್ಷೆಗೆ ಬಂದಿದ್ದ ಎಂಬ ಮಾಹಿತಿ ಲಭಿಸಿದೆ.