ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಳ್ಳಾಲದಲ್ಲಿ ದಡಕ್ಕೆ ಅಪ್ಪಳಿಸಿದ ಬೋಟ್‌: 10 ಮೀನುಗಾರರ ರಕ್ಷಣೆ

Last Updated 23 ಮೇ 2021, 7:39 IST
ಅಕ್ಷರ ಗಾತ್ರ

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಸಮೀಪದ ಕೋಡಿಯಲ್ಲಿ ಮೀನುಗಾರಿಕಾ ಬೋಟ್ ನಿಯಂತ್ರಣ ತಪ್ಪಿ ದಡಕ್ಕೆ ಅಪ್ಪಳಿಸಿದ್ದು, ಅದರಲ್ಲಿದ್ದ 10 ಮಂದಿ ಮೀನುಗಾರರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

ಶನಿವಾರ ತಡರಾತ್ರಿ 1.30ಕ್ಕೆ ಮಂಗಳೂರು ಧಕ್ಕೆಯಿಂದ ಆಳಸಮುದ್ರ ಮೀನುಗಾರಿಕೆಗೆ ಬೋಟ್‌ ತೆರಳಿತ್ತು. ಉಳ್ಳಾಲದ ಅಶ್ರಫ್ ಮತ್ತು ಫಾರೂಕ್ ಎಂಬುವರಿಗೆ ಸೇರಿದ ‘ಅಝಾನ್’ ಹೆಸರಿನ ಬೋಟ್ ಇದಾಗಿದೆ.

‘ಕನ್ಯಾಕುಮಾರಿಯ ಐವರು ಮೀನುಗಾರರು ಸೇರಿದಂತೆ ಒಟ್ಟು 10 ಮಂದಿ ಬೋಟ್‌ನಲ್ಲಿದ್ದರು. ಈ ಪೈಕಿ ಹಲವರು ಕುಡಿತದ ಮತ್ತಿನಲ್ಲಿದ್ದರು. ಚಾಲಕ ಇನ್ನೊಬ್ಬನ ಕೈಯಲ್ಲಿ ಬೋಟ್ ನೀಡಿದ ಪರಿಣಾಮ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ. ಭಾನುವಾರ ನಸುಕಿನ ವೇಳೆಯಲ್ಲಿ ಬೋಟ್‌ ದಡಕ್ಕೆ ಅಪ್ಪಳಿಸಿದಾಗ ಅದರಲ್ಲಿದ್ದ ಮೀನುಗಾರರು ವಾಂತಿ ಮಾಡುತ್ತಿದ್ದರು’ ಎಂದು ಸ್ಥಳೀಯರು ತಿಳಿಸಿದ್ದಾರೆ.

ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT