<p><strong>ಮಂಗಳೂರು</strong>: ನಗರದ ವೆನ್ಲಾಕ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರಿಗೆ ಮಾಹಿತಿ ನೀಡಿ ಗೊಂದಲ ಸೃಷ್ಟಿಸಿದ ಘಟನೆ ನಗರದಲ್ಲಿ ನಡೆದಿದೆ.</p>.<p>ಉಪ್ಪಿನಂಗಡಿಯ ಅರ್ಪಿಲ್ ನಿವಾಸಿಯೊಬ್ಬರನ್ನು (55 ವರ್ಷ) ಚಿಕಿತ್ಸೆ ಸಲುವಾಗಿ ವೆನ್ಲಾಕ್ ಆಸ್ಪತ್ರೆಗೆ ಶನಿವಾರ ದಾಖಲಿಸಲಾಗಿತ್ತು. ಅವರು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯಿಂದ ಮಂಗಳೂರು ದಕ್ಷಿಣ ಠಾಣೆಗೆ ಭಾನುವಾರ ಮಾಹಿತಿ ರವಾನೆಯಾಗಿದೆ. ಆ ಠಾಣೆಯವರು ರೋಗಿಯ ಕುಟುಂಬದವರ ವಿಳಾಸ ಸಹಿತ ಧರ್ಮಸ್ಥಳ ಠಾಣೆಗೆ ಮಾಹಿತಿ ನೀಡಿದ್ದರು. ಧರ್ಮಸ್ಥಳ ಠಾಣೆಯ ಪೊಲೀಸರು ಆ ರೋಗಿಯ ಬಂಧುಗಳಿಗೆ ಮಾಹಿತಿ ನೀಡಿದ್ದರು. ರೋಗಿಯ ಬಂಧುಗಳು ಆಸ್ಪತ್ರೆಯ ಶವಾಗಾರಕ್ಕೆ ಬಂದು ನೋಡಿದಾಗ, ಅಂತಹ ವ್ಯಕ್ತಿ ಮೃತಪಟ್ಟಿಲ್ಲ ಎಂದು ಗೊತ್ತಾಗಿತ್ತು. ರೋಗಿಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದರಿಂದ ಅವರ ಬಂಧುಗಳು ನಿಟ್ಟುಸಿರು ಬಿಟ್ಟಿದ್ದರು.</p>.<p>ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ದಕ್ಷಿಣ ಠಾಣೆಯ ಅಧಿಕಾರಿಯೊಬ್ಬರು, ‘ಸಂವಹನದ ಸಂದರ್ಭದಲ್ಲಿ ಲೋಪವಾಗಿದ್ದರಿಂದ ಈ ಗೊಂದಲ ಉಂಟಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ನಗರದ ವೆನ್ಲಾಕ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರಿಗೆ ಮಾಹಿತಿ ನೀಡಿ ಗೊಂದಲ ಸೃಷ್ಟಿಸಿದ ಘಟನೆ ನಗರದಲ್ಲಿ ನಡೆದಿದೆ.</p>.<p>ಉಪ್ಪಿನಂಗಡಿಯ ಅರ್ಪಿಲ್ ನಿವಾಸಿಯೊಬ್ಬರನ್ನು (55 ವರ್ಷ) ಚಿಕಿತ್ಸೆ ಸಲುವಾಗಿ ವೆನ್ಲಾಕ್ ಆಸ್ಪತ್ರೆಗೆ ಶನಿವಾರ ದಾಖಲಿಸಲಾಗಿತ್ತು. ಅವರು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯಿಂದ ಮಂಗಳೂರು ದಕ್ಷಿಣ ಠಾಣೆಗೆ ಭಾನುವಾರ ಮಾಹಿತಿ ರವಾನೆಯಾಗಿದೆ. ಆ ಠಾಣೆಯವರು ರೋಗಿಯ ಕುಟುಂಬದವರ ವಿಳಾಸ ಸಹಿತ ಧರ್ಮಸ್ಥಳ ಠಾಣೆಗೆ ಮಾಹಿತಿ ನೀಡಿದ್ದರು. ಧರ್ಮಸ್ಥಳ ಠಾಣೆಯ ಪೊಲೀಸರು ಆ ರೋಗಿಯ ಬಂಧುಗಳಿಗೆ ಮಾಹಿತಿ ನೀಡಿದ್ದರು. ರೋಗಿಯ ಬಂಧುಗಳು ಆಸ್ಪತ್ರೆಯ ಶವಾಗಾರಕ್ಕೆ ಬಂದು ನೋಡಿದಾಗ, ಅಂತಹ ವ್ಯಕ್ತಿ ಮೃತಪಟ್ಟಿಲ್ಲ ಎಂದು ಗೊತ್ತಾಗಿತ್ತು. ರೋಗಿಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದರಿಂದ ಅವರ ಬಂಧುಗಳು ನಿಟ್ಟುಸಿರು ಬಿಟ್ಟಿದ್ದರು.</p>.<p>ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ದಕ್ಷಿಣ ಠಾಣೆಯ ಅಧಿಕಾರಿಯೊಬ್ಬರು, ‘ಸಂವಹನದ ಸಂದರ್ಭದಲ್ಲಿ ಲೋಪವಾಗಿದ್ದರಿಂದ ಈ ಗೊಂದಲ ಉಂಟಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>