<p><strong>ಮಂಗಳೂರು</strong>: ‘ವಿದ್ಯಾಭ್ಯಾಸಕ್ಕಾಗಿ ದೇಶ ವಿದೇಶಗಳಿಂದ ಜನ ಮಂಗಳೂರಿಗೆ ಬರುತ್ತಾರೆ. ಇಲ್ಲಿ ಕಲಿತವರು ಉದ್ಯೋಗ ಅರಸಿ ಬೆಂಗಳೂರು, ಮುಂಬೈ, ಅರಬ್ ದೇಶಗಳಿಗೆ ಹೋಗುತ್ತಿರುವುದು ವಿಪರ್ಯಾಸ. ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಿ, ಇಲ್ಲೇ ಉದ್ಯೋಗಾವಕಾಶ ಸೃಷ್ಟಿಸುವ ಮೂಲಕ ಈ ಪರಿಸ್ಥಿತಿಯನ್ನು ಬದಲಿಸಬೇಕಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿ ಶನಿವಾರ ಹೇಳಿದರು. </p>.<p>ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲಾಡಳಿತಗಳ ಸಹಯೋಗದಲ್ಲಿ ಪ್ರವಾಸೋದ್ಯಮ ಇಲಾಖೆ ಏರ್ಪಡಿಸಿದ್ದ ‘ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ’ದ ಸಮಾರೋಪದಲ್ಲಿ ಮಾತನಾಡಿದರು. </p>.<p>‘ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚು ಅವಕಾಶಗಳಿವೆ. ಇದನ್ನು ಸಮರ್ಥವಾಗಿ ಬಳಸಿಕೊಳ್ಳುವ ಕಾರ್ಯವನ್ನು ಯಾವ ಸರ್ಕಾರಗಳೂ ಮಾಡಿಲ್ಲ. ಈಗಲಾದರೂ ಅದನ್ನು ಮಾಡಬೇಕಿದೆ. ಇಲ್ಲಿ ಪ್ರವಾಸೋದ್ಯಮ ಅಭುವೃದ್ಧಿಪಡಿಸಲು ಮುಂದಾಗುವವರಿಗೆ ಸರ್ಕಾರ ಸಕಲ ನೆರವು ಒದಗಿಸಲಿದೆ’ ಎಂದರು. </p>.<p>‘ಕರಾವಳಿಯವರು ಪುಣೆ, ದುಬೈ, ಲಂಡನ್ನಂತಹ ಕಡೆಗಳಲ್ಲಿ ಉದ್ಯಮ ಬೆಳೆಸಿ ಯಶಸ್ವಿಯಾಗಿದ್ದಾರೆ. ಅವರು ಇಲ್ಲೇ ಉದ್ಯಮ ಸ್ಥಾಪಿಸಿದರೆ ಕರಾವಳಿ ಜಿಲ್ಲೆಗಳು ಬೆಳವಣಿಗೆ ಕಾಣಲಿವೆ’ ಎಂದರು. </p>.<p>‘ಪ್ರವಾಸೋದ್ಯಮ ಹಾಗೂ ಶಿಕ್ಷಣದಲ್ಲಿ ಕೇರಳ ನಮ್ಮ ರಾಜ್ಯಕ್ಕಿಂತ ಮುಂದಿದೆ. ಜಿಎಸ್ಟಿ ಸಂಗ್ರಹದಲ್ಲಿ ಮಹಾರಾಷ್ಟ್ರ ಮುಂದಿದೆ. ಇಲ್ಲಿನ ತಲಾ ಆದಾಯ ಮಹಾರಾಷ್ಟ್ರಕ್ಕಿಂತ ಸ್ವಲ್ಪ ಕಡಿಮೆ ಇದೆ. ಪ್ರವಾಸೋದ್ಯಮ ಅಭಿವೃದ್ಧಿಯಾದರೆ, ಮಹಾರಾಷ್ಟ್ರವನ್ನೂ ಹಿಂದಿಕ್ಕಿ ಮುನ್ನಡೆಯುವ ಅವಕಾಶ ಮಂಗಳೂರಿಗೆ ಇದೆ’ ಎಂದರು.</p>.<p class="Subhead">ಕೇಂದ್ರಕ್ಕೆ ನಿಯೋಗ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ‘ಪ್ರವಾಸೋದ್ಯಮ ಅಭಿವೃದ್ಧಿಗೆ ಕರಾವಳಿ ನಿಯಂತ್ರಣ ವಲಯ (ಸಿಆರ್ಜೆಡ್) ನಿಯಮಗಳ ತೊಡಕು ಇರುವುದು ಗಮನಕ್ಕೆ ಬಂದಿದೆ. ಮುಖ್ಯಮಂತ್ರಿ, ನಾನು, ಪ್ರವಾಸೋದ್ಯಮ ಸಚಿವರು, ಈ ಭಾಗದ ಸಂಸದರ ನಿಯೋಗವನ್ನು ಕೇಂದ್ರ ಸರ್ಕಾರದ ಬಳಿ ಶೀಘ್ರವೇ ಕೊಂಡೊಯ್ದು ಈ ಸಮಸ್ಯೆ ಬಗೆಹರಿಸಲು ಕ್ರಮವಹಿಸಲಿದ್ದೇವೆ’ ಎಂದರು. </p>.<p>ಕರಾವಳಿಯ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಇರುವ ಅವಕಾಶಗಳು, ತೊಡಕುಗಳ ಕುರಿತು ವಿವಿಧ ಗೋಷ್ಠಿಗಳು ನಡೆದವು. ಅಧಿಕಾರಿಗಳು, ಕ್ರೆಡೈ, ವಾಣಿಜ್ಯ ಸಂಸ್ಥೆಗಳ ಪ್ರತಿನಿಧಿಗಳು, ಉದ್ಯಮಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ‘ವಿದ್ಯಾಭ್ಯಾಸಕ್ಕಾಗಿ ದೇಶ ವಿದೇಶಗಳಿಂದ ಜನ ಮಂಗಳೂರಿಗೆ ಬರುತ್ತಾರೆ. ಇಲ್ಲಿ ಕಲಿತವರು ಉದ್ಯೋಗ ಅರಸಿ ಬೆಂಗಳೂರು, ಮುಂಬೈ, ಅರಬ್ ದೇಶಗಳಿಗೆ ಹೋಗುತ್ತಿರುವುದು ವಿಪರ್ಯಾಸ. ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಿ, ಇಲ್ಲೇ ಉದ್ಯೋಗಾವಕಾಶ ಸೃಷ್ಟಿಸುವ ಮೂಲಕ ಈ ಪರಿಸ್ಥಿತಿಯನ್ನು ಬದಲಿಸಬೇಕಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿ ಶನಿವಾರ ಹೇಳಿದರು. </p>.<p>ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲಾಡಳಿತಗಳ ಸಹಯೋಗದಲ್ಲಿ ಪ್ರವಾಸೋದ್ಯಮ ಇಲಾಖೆ ಏರ್ಪಡಿಸಿದ್ದ ‘ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ’ದ ಸಮಾರೋಪದಲ್ಲಿ ಮಾತನಾಡಿದರು. </p>.<p>‘ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚು ಅವಕಾಶಗಳಿವೆ. ಇದನ್ನು ಸಮರ್ಥವಾಗಿ ಬಳಸಿಕೊಳ್ಳುವ ಕಾರ್ಯವನ್ನು ಯಾವ ಸರ್ಕಾರಗಳೂ ಮಾಡಿಲ್ಲ. ಈಗಲಾದರೂ ಅದನ್ನು ಮಾಡಬೇಕಿದೆ. ಇಲ್ಲಿ ಪ್ರವಾಸೋದ್ಯಮ ಅಭುವೃದ್ಧಿಪಡಿಸಲು ಮುಂದಾಗುವವರಿಗೆ ಸರ್ಕಾರ ಸಕಲ ನೆರವು ಒದಗಿಸಲಿದೆ’ ಎಂದರು. </p>.<p>‘ಕರಾವಳಿಯವರು ಪುಣೆ, ದುಬೈ, ಲಂಡನ್ನಂತಹ ಕಡೆಗಳಲ್ಲಿ ಉದ್ಯಮ ಬೆಳೆಸಿ ಯಶಸ್ವಿಯಾಗಿದ್ದಾರೆ. ಅವರು ಇಲ್ಲೇ ಉದ್ಯಮ ಸ್ಥಾಪಿಸಿದರೆ ಕರಾವಳಿ ಜಿಲ್ಲೆಗಳು ಬೆಳವಣಿಗೆ ಕಾಣಲಿವೆ’ ಎಂದರು. </p>.<p>‘ಪ್ರವಾಸೋದ್ಯಮ ಹಾಗೂ ಶಿಕ್ಷಣದಲ್ಲಿ ಕೇರಳ ನಮ್ಮ ರಾಜ್ಯಕ್ಕಿಂತ ಮುಂದಿದೆ. ಜಿಎಸ್ಟಿ ಸಂಗ್ರಹದಲ್ಲಿ ಮಹಾರಾಷ್ಟ್ರ ಮುಂದಿದೆ. ಇಲ್ಲಿನ ತಲಾ ಆದಾಯ ಮಹಾರಾಷ್ಟ್ರಕ್ಕಿಂತ ಸ್ವಲ್ಪ ಕಡಿಮೆ ಇದೆ. ಪ್ರವಾಸೋದ್ಯಮ ಅಭಿವೃದ್ಧಿಯಾದರೆ, ಮಹಾರಾಷ್ಟ್ರವನ್ನೂ ಹಿಂದಿಕ್ಕಿ ಮುನ್ನಡೆಯುವ ಅವಕಾಶ ಮಂಗಳೂರಿಗೆ ಇದೆ’ ಎಂದರು.</p>.<p class="Subhead">ಕೇಂದ್ರಕ್ಕೆ ನಿಯೋಗ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ‘ಪ್ರವಾಸೋದ್ಯಮ ಅಭಿವೃದ್ಧಿಗೆ ಕರಾವಳಿ ನಿಯಂತ್ರಣ ವಲಯ (ಸಿಆರ್ಜೆಡ್) ನಿಯಮಗಳ ತೊಡಕು ಇರುವುದು ಗಮನಕ್ಕೆ ಬಂದಿದೆ. ಮುಖ್ಯಮಂತ್ರಿ, ನಾನು, ಪ್ರವಾಸೋದ್ಯಮ ಸಚಿವರು, ಈ ಭಾಗದ ಸಂಸದರ ನಿಯೋಗವನ್ನು ಕೇಂದ್ರ ಸರ್ಕಾರದ ಬಳಿ ಶೀಘ್ರವೇ ಕೊಂಡೊಯ್ದು ಈ ಸಮಸ್ಯೆ ಬಗೆಹರಿಸಲು ಕ್ರಮವಹಿಸಲಿದ್ದೇವೆ’ ಎಂದರು. </p>.<p>ಕರಾವಳಿಯ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಇರುವ ಅವಕಾಶಗಳು, ತೊಡಕುಗಳ ಕುರಿತು ವಿವಿಧ ಗೋಷ್ಠಿಗಳು ನಡೆದವು. ಅಧಿಕಾರಿಗಳು, ಕ್ರೆಡೈ, ವಾಣಿಜ್ಯ ಸಂಸ್ಥೆಗಳ ಪ್ರತಿನಿಧಿಗಳು, ಉದ್ಯಮಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>