ಸೋಮವಾರ ಮಾರಣಕಟ್ಟೆಯಲ್ಲಿ ನಡೆದ ಯಕ್ಷಗಾನದಲ್ಲಿ ಭಾಗವತಿಕೆ ಮಾಡಿದ್ದ ಸುಬ್ರಹ್ಮಣ್ಯ ಆಚಾರ್ಯ, ಮಂಗಳವಾರ ಬೆಳಿಗ್ಗೆ ಮಂಗಳೂರಿಗೆ ಬಂದಿದ್ದರು. ಇಲ್ಲಿನ ಕುಲಶೇಖರದ ಸಂತೋಷ್ ಎಂಬ ಯಕ್ಷಗಾನ ಕಲಾವಿದರ ಮನೆಗೆ ಬಂದು ವಿಷ ಸೇವಿಸಿದ್ದರು. ಬಳಿಕ ಅವರನ್ನು ಚಿಕಿತ್ಸೆಗಾಗಿ ವೆನ್ಲಾಕ್ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.