<p><strong>ಮಂಗಳೂರು:</strong> ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಪರಿಣಾಮ ದಕ್ಷಿಣ ರೈಲ್ವೆಗೆ ಸೇರಿದ ಕುಲಶೇಖರ- ಪಡೀಲ್ ರೈಲ್ವೆ ಸುರಂಗ ಮಾರ್ಗದ ಬಳಿ ಜುಲೈ 16ರಂದು ಭೂ ಕುಸಿತವಾಗಿ ಹಳಿಗಳ ಮೇಲೆ ಮಣ್ಣು ಬಿದ್ದಿದ್ದನ್ನು ತೆಗೆಯುವ ಕೆಲಸ ಪೂರ್ಣಗೊಂಡಿದೆ.</p>.<p>ಕಲ್ಲು ಮಣ್ಣಿನ ತೆರವು ಕಾರ್ಯಾಚರಣೆ ಶನಿವಾರ ತಡರಾತ್ರಿಯವರೆಗೂ ನಡೆದಿದ್ದು, ಇಂದು ಬೆಳಗ್ಗಿನಿಂದ ಮತ್ತೆ ರೈಲು ಸಂಚಾರ ಪುನರಾರಂಭಗೊಂಡಿದೆ.</p>.<p>ಪಾಲ್ಘಾಟ್ ರೈಲ್ವೆ ವಿಭಾಗಕ್ಕೆ ಬರುವ ಈ ಹಳಿಯಲ್ಲಿ ಇಂದಿನಿಂದ ರೈಲು ಸಂಚಾರ ಪುನಾರಂಭಿಸಲಾಗುವುದು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಅದರಂತೆ ಭಾನುವಾರ ಬೆಳಿಗ್ಗೆ 8:45ರ ವೇಳೆಗೆ ಎರ್ನಾಕುಲಂನಿಂದ ಅಜ್ಮೀರ್ಗೆ ಮೊದಲ ರೈಲು ಪ್ರಯಾಣ ಬೆಳೆಸಿತು. ಮಣ್ಣು ಕುಸಿತಗೊಂಡ ಕುಲಶೇಖರ ಪ್ರದೇಶದಲ್ಲಿ ರೈಲು ತೆರಳುವ ವೇಳೆ ರೈಲ್ವೆ ಇಲಾಖೆ ಸಿಬ್ಬಂದಿ ಇದ್ದರು.</p>.<p><strong>ಇದನ್ನೂ ಓದಿ... <a href="https://www.prajavani.net/india-news/heavy-rain-maharashtra-mumbai-rains-people-killed-in-wall-collapse-on-some-shanties-landslide-849202.html" target="_blank">ಮುಂಬೈನಲ್ಲಿ ಭಾರಿ ಮಳೆ: ಭೂಕುಸಿತದಿಂದ 25 ಮಂದಿ ಸಾವು, ಹಲವರಿಗೆ ಗಾಯ</a></strong></p>.<p>ಬೆಂಗಳೂರು-ಕಾರವಾರ-ಬೆಂಗಳೂರು ಎಕ್ಸ್ಪ್ರೆಸ್ ರೈಲು ಶನಿವಾರ ರದ್ದಾಗಿದೆ.</p>.<p>ಭೂ ಕುಸಿತವಾಗಿರುವ ಕಾರಣ ಈ ಹಳಿಯ ಮೂಲಕ ಚಲಿಸುವ ಎಲ್ಲ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದ್ದು, ದಕ್ಷಿಣ ಮಧ್ಯ ರೈಲ್ವೆ ಸೋಮವಾರದಿಂದ ಕಾಯ್ದಿರಿಸಿದ ರೈಲುಗಳನ್ನು ಪುನರಾರಂಭಿಸಲಿದೆ.</p>.<p>ರೈಲ್ವೆ ಇಲಾಖೆಯು ಒಂದು ವರ್ಷದಲ್ಲಿ ಪ್ರಮುಖ ಟ್ರ್ಯಾಕ್ ಬಲಪಡಿಸುವ ಕಾರ್ಯ ಕೈಗೊಂಡಿದ್ದು, ಇದೀಗ ರೈಲುಗಳು ಚಗ್ ಮಾಡಬಹುದಾದ ಗರಿಷ್ಠ ಅನುಮತಿಸುವ ವೇಗವನ್ನು ಹೆಚ್ಚಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ರಾತ್ರಿಯಿಂದ ಮಳೆ ಮತ್ತಷ್ಟು ಬಿರುಸುಗೊಂಡಿದೆ. ಎಡೆಬಿಡದೆ ಧಾರಾಕಾರ ಮಳೆ ಸುರಿಯುತ್ತಿದೆ.</p>.<p>ಪುತ್ತೂರು ಕಬಕ -ಸುಬ್ರಹ್ಮಣ್ಯ ರೈಲ್ವೆ ಹಳಿಯ ನಡುವೆ ವೀರಮಂಗಲ ಗಡಿಪಿಲ ಸಮೀಪದಲ್ಲಿ ರೈಲು ಚಲಿಸುತ್ತಿದ್ದಾಗ ಧರೆ ಕುಸಿದು ರೈಲಿನ ಗಾರ್ಡ್ಗೆ ಹಾನಿಯಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.<br /><br />ಮಂಗಳೂರು-ಬೆಂಗಳೂರು ಪ್ರಯಾಣಿಕ ರೈಲು ಈ ಹಳಿಯಲ್ಲಿ ಹಾದು ಹೋಗುತ್ತಿದ್ದಾಗ ಏಕಾಏಕಿ ಧರೆ ಕುಸಿದಿದ್ದು, ಮಣ್ಣು ರೈಲಿನ ಮುಂಭಾಗಕ್ಕೆ ಕುಸಿದಿದೆ.<br /><br />ರೈಲು ಈಗ ಹಳಿಯಲ್ಲಿ ಬಾಕಿಯಾಗಿದ್ದು, ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮಣ್ಣು <span class="tojvnm2t a6sixzi8 abs2jz4q a8s20v7p t1p8iaqh k5wvi7nf q3lfd5jv pk4s997a bipmatt0 cebpdrjk qowsmv63 owwhemhu dp1hu0rb dhp61c6y iyyx5f41">ತೆರವು ಕಾರ್ಯ ನಡೆಯುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.</span><span class="tojvnm2t a6sixzi8 abs2jz4q a8s20v7p t1p8iaqh k5wvi7nf q3lfd5jv pk4s997a bipmatt0 cebpdrjk qowsmv63 owwhemhu dp1hu0rb dhp61c6y iyyx5f41"> ಇದು ತೆರವು ಕಾರ್ಯ ಮುಗಿದಿದ್ದು, ರೈಲು ಸಂಚಾರ ಸುಮಾರು 40 ನಿಮಿಷ ವಿಳಂಬವಾಗಿದೆ.</span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಪರಿಣಾಮ ದಕ್ಷಿಣ ರೈಲ್ವೆಗೆ ಸೇರಿದ ಕುಲಶೇಖರ- ಪಡೀಲ್ ರೈಲ್ವೆ ಸುರಂಗ ಮಾರ್ಗದ ಬಳಿ ಜುಲೈ 16ರಂದು ಭೂ ಕುಸಿತವಾಗಿ ಹಳಿಗಳ ಮೇಲೆ ಮಣ್ಣು ಬಿದ್ದಿದ್ದನ್ನು ತೆಗೆಯುವ ಕೆಲಸ ಪೂರ್ಣಗೊಂಡಿದೆ.</p>.<p>ಕಲ್ಲು ಮಣ್ಣಿನ ತೆರವು ಕಾರ್ಯಾಚರಣೆ ಶನಿವಾರ ತಡರಾತ್ರಿಯವರೆಗೂ ನಡೆದಿದ್ದು, ಇಂದು ಬೆಳಗ್ಗಿನಿಂದ ಮತ್ತೆ ರೈಲು ಸಂಚಾರ ಪುನರಾರಂಭಗೊಂಡಿದೆ.</p>.<p>ಪಾಲ್ಘಾಟ್ ರೈಲ್ವೆ ವಿಭಾಗಕ್ಕೆ ಬರುವ ಈ ಹಳಿಯಲ್ಲಿ ಇಂದಿನಿಂದ ರೈಲು ಸಂಚಾರ ಪುನಾರಂಭಿಸಲಾಗುವುದು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಅದರಂತೆ ಭಾನುವಾರ ಬೆಳಿಗ್ಗೆ 8:45ರ ವೇಳೆಗೆ ಎರ್ನಾಕುಲಂನಿಂದ ಅಜ್ಮೀರ್ಗೆ ಮೊದಲ ರೈಲು ಪ್ರಯಾಣ ಬೆಳೆಸಿತು. ಮಣ್ಣು ಕುಸಿತಗೊಂಡ ಕುಲಶೇಖರ ಪ್ರದೇಶದಲ್ಲಿ ರೈಲು ತೆರಳುವ ವೇಳೆ ರೈಲ್ವೆ ಇಲಾಖೆ ಸಿಬ್ಬಂದಿ ಇದ್ದರು.</p>.<p><strong>ಇದನ್ನೂ ಓದಿ... <a href="https://www.prajavani.net/india-news/heavy-rain-maharashtra-mumbai-rains-people-killed-in-wall-collapse-on-some-shanties-landslide-849202.html" target="_blank">ಮುಂಬೈನಲ್ಲಿ ಭಾರಿ ಮಳೆ: ಭೂಕುಸಿತದಿಂದ 25 ಮಂದಿ ಸಾವು, ಹಲವರಿಗೆ ಗಾಯ</a></strong></p>.<p>ಬೆಂಗಳೂರು-ಕಾರವಾರ-ಬೆಂಗಳೂರು ಎಕ್ಸ್ಪ್ರೆಸ್ ರೈಲು ಶನಿವಾರ ರದ್ದಾಗಿದೆ.</p>.<p>ಭೂ ಕುಸಿತವಾಗಿರುವ ಕಾರಣ ಈ ಹಳಿಯ ಮೂಲಕ ಚಲಿಸುವ ಎಲ್ಲ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದ್ದು, ದಕ್ಷಿಣ ಮಧ್ಯ ರೈಲ್ವೆ ಸೋಮವಾರದಿಂದ ಕಾಯ್ದಿರಿಸಿದ ರೈಲುಗಳನ್ನು ಪುನರಾರಂಭಿಸಲಿದೆ.</p>.<p>ರೈಲ್ವೆ ಇಲಾಖೆಯು ಒಂದು ವರ್ಷದಲ್ಲಿ ಪ್ರಮುಖ ಟ್ರ್ಯಾಕ್ ಬಲಪಡಿಸುವ ಕಾರ್ಯ ಕೈಗೊಂಡಿದ್ದು, ಇದೀಗ ರೈಲುಗಳು ಚಗ್ ಮಾಡಬಹುದಾದ ಗರಿಷ್ಠ ಅನುಮತಿಸುವ ವೇಗವನ್ನು ಹೆಚ್ಚಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ರಾತ್ರಿಯಿಂದ ಮಳೆ ಮತ್ತಷ್ಟು ಬಿರುಸುಗೊಂಡಿದೆ. ಎಡೆಬಿಡದೆ ಧಾರಾಕಾರ ಮಳೆ ಸುರಿಯುತ್ತಿದೆ.</p>.<p>ಪುತ್ತೂರು ಕಬಕ -ಸುಬ್ರಹ್ಮಣ್ಯ ರೈಲ್ವೆ ಹಳಿಯ ನಡುವೆ ವೀರಮಂಗಲ ಗಡಿಪಿಲ ಸಮೀಪದಲ್ಲಿ ರೈಲು ಚಲಿಸುತ್ತಿದ್ದಾಗ ಧರೆ ಕುಸಿದು ರೈಲಿನ ಗಾರ್ಡ್ಗೆ ಹಾನಿಯಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.<br /><br />ಮಂಗಳೂರು-ಬೆಂಗಳೂರು ಪ್ರಯಾಣಿಕ ರೈಲು ಈ ಹಳಿಯಲ್ಲಿ ಹಾದು ಹೋಗುತ್ತಿದ್ದಾಗ ಏಕಾಏಕಿ ಧರೆ ಕುಸಿದಿದ್ದು, ಮಣ್ಣು ರೈಲಿನ ಮುಂಭಾಗಕ್ಕೆ ಕುಸಿದಿದೆ.<br /><br />ರೈಲು ಈಗ ಹಳಿಯಲ್ಲಿ ಬಾಕಿಯಾಗಿದ್ದು, ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮಣ್ಣು <span class="tojvnm2t a6sixzi8 abs2jz4q a8s20v7p t1p8iaqh k5wvi7nf q3lfd5jv pk4s997a bipmatt0 cebpdrjk qowsmv63 owwhemhu dp1hu0rb dhp61c6y iyyx5f41">ತೆರವು ಕಾರ್ಯ ನಡೆಯುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.</span><span class="tojvnm2t a6sixzi8 abs2jz4q a8s20v7p t1p8iaqh k5wvi7nf q3lfd5jv pk4s997a bipmatt0 cebpdrjk qowsmv63 owwhemhu dp1hu0rb dhp61c6y iyyx5f41"> ಇದು ತೆರವು ಕಾರ್ಯ ಮುಗಿದಿದ್ದು, ರೈಲು ಸಂಚಾರ ಸುಮಾರು 40 ನಿಮಿಷ ವಿಳಂಬವಾಗಿದೆ.</span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>