ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಕನ್ನಡ: ಧರೆಗುರುಳಿದ ಹಳೆಯ ಗೋಳಿ ಮರ, 5 ವಿದ್ಯುತ್ ಕಂಬಕ್ಕೆ ಹಾನಿ

Last Updated 16 ಜೂನ್ 2021, 12:25 IST
ಅಕ್ಷರ ಗಾತ್ರ

ಮಂಗಳೂರು: ಕರಾವಳಿಯಲ್ಲಿ ಮಳೆಯಬ್ಬರ ಮುಂದುವರಿದಿದೆ. ಬುಧವಾರ ಮಧ್ಯಾಹ್ನ ಸುರಿದ ಭಾರಿ ಗಾಳಿಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಕಡೇಶಿವಾಲಯ ಗ್ರಾಮದ ಸಂಪೋಳಿಯಲ್ಲಿ ಬೃಹತ್‌ ಗಾತ್ರದ ಗೋಳಿ ಮರವೊಂದು ಧರೆಗುರುಳಿದೆ.

ಸಂಜೆ 4 ಗಂಟೆಯ ವೇಳೆಗೆ ಬೀಸಿದ ಗಾಳಿಗೆ ಬೃಹತ್‌ ಮರ ರಸ್ತೆಗೆ ಉರುಳಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸಮೀಪದಲ್ಲೇ ಇದ್ದ ಐದಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು ಕೂಡ ಧರೆಗುರುಳಿವೆ. ಇಲ್ಲಿನ ನಾಗೇಶ್‌ ಸಂಪೋಳಿ ಅವರ ಜಮೀನಿನಲ್ಲಿ ಇದ್ದ ಈ ಮರದ ಪಕ್ಕದಲ್ಲೇ ನಾಲ್ಕೈದು ಮನೆಗಳು ಇದ್ದವು. ಆದೃಷ್ಟವಶಾತ್‌ ಯಾವುದೇ ಮನೆಗಳಿಗೆ ಹಾನಿಯಾಗಿಲ್ಲ.

ಮೆಸ್ಕಾಂ ಮತ್ತು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಇನ್ನಷ್ಟೇ ಮರವನ್ನು ತೆರವುಗೊಳಿಸುವ ಕಾರ್ಯ ಆರಂಭವಾಗುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT