<p><strong>ಮಂಗಳೂರು:</strong> ಮನೆಯಿಂದ ಹಣ ಮತ್ತು ಚಿನ್ನ ಕಳವು ಮಾಡಿದ್ದಾರೆ ಎಂದು ಆರೋಪಿಸಿ ಮನೆ ಕೆಲಸ ಮಾಡುತ್ತಿದ್ದ ಕಾರ್ಮಿಕರಿಬ್ಬರಿಗೆ ಮನೆಯವರು ಹಲ್ಲೆ ನಡೆಸಿದ ದೃಶ್ಯವಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಈ ವಿಡಿಯೊದಲ್ಲಿರುವುದು ನಗರದ ಹೊರವಲಯದ ಅರ್ಕುಳದ ಮನೆಯೊಂದರಲ್ಲಿ ನಡೆದ ಘಟನೆಯ ದೃಶ್ಯ ಎಂಬುದನ್ನು ಪೊಲೀಸ್ ಮೂಲಗಳು ಖಚಿತಪಡಿಸಿವೆ.</p>.<p>‘ಅರ್ಕುಳದ ಮನೆಯೊಂದರಲ್ಲಿ ಬಿಹಾರದ ಇಬ್ಬರು ಕಾರ್ಮಿಕರು ಕೆಲಸಕ್ಕಿದ್ದರು. ಅದೇ ಮನೆಯಿಂದ ₹ 1.5 ಲಕ್ಷ ನಗದು ಹಾಗೂ ಚಿನ್ನಾಭರಣ ಕದ್ದ ಆರೋಪ ಅವರ ಮೇಲಿದೆ. ಅವರ ಬಾಯಿ ಬಿಡಿಸಲು ಮನೆಯವರು ಹಲ್ಲೆ ನಡೆಸಿದ್ದು, ಈ ದೃಶ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ದಾಖಲಾಗಿತ್ತು’ ಎಂದು ಗೊತ್ತಾಗಿದೆ.</p>.<p>ಈ ಬಗ್ಗೆ ಪ್ರತಿಕ್ರಿಯಿಸಿರುವ ನಗರ ಪೊಲೀಸ್ ಅಧಿಕಾರಿಯೊಬ್ಬರು, ‘ ವಿಡಿಯೊವನ್ನು ಗಮನಿಸಿ ಕೂಡಲೇ ವಿಚಾರಣೆ ನಡೆಸಿದ್ದೇವೆ. ಅರ್ಕುಳದ ಮನೆಯೊಂದರಲ್ಲಿ ಕೆಲಸಕ್ಕಿದ್ದ ಬಿಹಾರದ ಯುವಕ ನಗದು ಮತ್ತು ಚಿನ್ನ ಕಳವು ಮಾಡಿದ್ದ. ಅದನ್ನು ಮರಳಿಸುವಂತೆ ಮನೆಯವರು ಹಲ್ಲೆ ನಡೆಸಿದ್ದಾರೆ. ಯುವಕ ನಗದು ಮತ್ತು ಚಿನ್ನ ಮರಳಿಸಿದ್ದಾನೆ. ಆತ ತನ್ನ ಊರಿಗೆ ವಾಪಸಾಗಿದ್ದಾನೆ. ಈ ಬಗ್ಗೆ ಯಾರೂ ದೂರು ನೀಡಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಮನೆಯಿಂದ ಹಣ ಮತ್ತು ಚಿನ್ನ ಕಳವು ಮಾಡಿದ್ದಾರೆ ಎಂದು ಆರೋಪಿಸಿ ಮನೆ ಕೆಲಸ ಮಾಡುತ್ತಿದ್ದ ಕಾರ್ಮಿಕರಿಬ್ಬರಿಗೆ ಮನೆಯವರು ಹಲ್ಲೆ ನಡೆಸಿದ ದೃಶ್ಯವಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಈ ವಿಡಿಯೊದಲ್ಲಿರುವುದು ನಗರದ ಹೊರವಲಯದ ಅರ್ಕುಳದ ಮನೆಯೊಂದರಲ್ಲಿ ನಡೆದ ಘಟನೆಯ ದೃಶ್ಯ ಎಂಬುದನ್ನು ಪೊಲೀಸ್ ಮೂಲಗಳು ಖಚಿತಪಡಿಸಿವೆ.</p>.<p>‘ಅರ್ಕುಳದ ಮನೆಯೊಂದರಲ್ಲಿ ಬಿಹಾರದ ಇಬ್ಬರು ಕಾರ್ಮಿಕರು ಕೆಲಸಕ್ಕಿದ್ದರು. ಅದೇ ಮನೆಯಿಂದ ₹ 1.5 ಲಕ್ಷ ನಗದು ಹಾಗೂ ಚಿನ್ನಾಭರಣ ಕದ್ದ ಆರೋಪ ಅವರ ಮೇಲಿದೆ. ಅವರ ಬಾಯಿ ಬಿಡಿಸಲು ಮನೆಯವರು ಹಲ್ಲೆ ನಡೆಸಿದ್ದು, ಈ ದೃಶ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ದಾಖಲಾಗಿತ್ತು’ ಎಂದು ಗೊತ್ತಾಗಿದೆ.</p>.<p>ಈ ಬಗ್ಗೆ ಪ್ರತಿಕ್ರಿಯಿಸಿರುವ ನಗರ ಪೊಲೀಸ್ ಅಧಿಕಾರಿಯೊಬ್ಬರು, ‘ ವಿಡಿಯೊವನ್ನು ಗಮನಿಸಿ ಕೂಡಲೇ ವಿಚಾರಣೆ ನಡೆಸಿದ್ದೇವೆ. ಅರ್ಕುಳದ ಮನೆಯೊಂದರಲ್ಲಿ ಕೆಲಸಕ್ಕಿದ್ದ ಬಿಹಾರದ ಯುವಕ ನಗದು ಮತ್ತು ಚಿನ್ನ ಕಳವು ಮಾಡಿದ್ದ. ಅದನ್ನು ಮರಳಿಸುವಂತೆ ಮನೆಯವರು ಹಲ್ಲೆ ನಡೆಸಿದ್ದಾರೆ. ಯುವಕ ನಗದು ಮತ್ತು ಚಿನ್ನ ಮರಳಿಸಿದ್ದಾನೆ. ಆತ ತನ್ನ ಊರಿಗೆ ವಾಪಸಾಗಿದ್ದಾನೆ. ಈ ಬಗ್ಗೆ ಯಾರೂ ದೂರು ನೀಡಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>