<p><strong>ಉಪ್ಪಿನಂಗಡಿ</strong>: ಇಲ್ಲಿಗೆ ಸಮೀಪದ ಕಣಿಯೂರು ಗ್ರಾಮದ ಯಂತ್ರಡ್ಕ ಎಂಬಲ್ಲಿನ ಮನೆಗೆ ನುಗ್ಗಿದ ಕಳ್ಳರು ಸುಮಾರು ₹ 1.28 ಲಕ್ಷ ಮೌಲ್ಯದ ನಗ ನಗದನ್ನು ಕಳವು ಮಾಡಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p>ಯಂತ್ರಡ್ಕದ ಅಬೂಬಕ್ಕರ್ ಸಿದ್ದಿಕ್ ಎಂಬುವರು ತನ್ನ ಮನೆಯವರೊಂದಿಗೆ ಮೂಡುಬಿದಿರೆಯ ಸಂಬಂಧಿಕರ ಮದುವೆಗೆಂದು ಹೋಗಿದ್ದರು. ಅವರು ವಾಪಸಾದಾಗ ಮನೆಯ ಕಪಾಟು ತೆರೆದುಕೊಂಡಿತ್ತು. ಪರಿಶೀಲಿಸಿದಾಗ ಕಪಾಟಿನಲ್ಲಿದ್ದ ₹ 58 ಸಾವಿರ ನಗದು, ₹ 70 ಸಾವಿರ ಮೌಲ್ಯದ 2 ಪವನ್ ಚಿನ್ನಾಭರಣಳು ಕಳವಾಗಿದ್ದವು. ಚಾವಣಿಯ ಹೆಂಚು ತೆಗೆದು ಕಳ್ಳರು ಒಳನುಗ್ಗಿದ್ದರು ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.</p>.<p><strong>ಹೆಚ್ಚುತ್ತಿರುವ ಕಳವು ಪ್ರಕರಣ:</strong> </p><p>ಕೆಲ ಸಮಯಗಳಿಂದ ಹಲವೆಡೆ ಕಳವು ಪ್ರಕರಣ ನಡೆಯುತ್ತಿದ್ದು, ಜನ ಆತಂಕದಲ್ಲಿದ್ದಾರೆ. ಕೆಲ ದಿನಗಳ ಹಿಂದೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೆಕ್ಕಿಲಾಡಿಯ 4 ಮನೆಗಳಲ್ಲಿ ಸರಣಿ ಕಳವು ನಡೆದಿತ್ತು. ಪೊಲೀಸ್ ಇಲಾಖೆ ಈ ಬಗ್ಗೆ ಹೆಚ್ಚಿನ ನಿಗಾ ಇರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಪ್ಪಿನಂಗಡಿ</strong>: ಇಲ್ಲಿಗೆ ಸಮೀಪದ ಕಣಿಯೂರು ಗ್ರಾಮದ ಯಂತ್ರಡ್ಕ ಎಂಬಲ್ಲಿನ ಮನೆಗೆ ನುಗ್ಗಿದ ಕಳ್ಳರು ಸುಮಾರು ₹ 1.28 ಲಕ್ಷ ಮೌಲ್ಯದ ನಗ ನಗದನ್ನು ಕಳವು ಮಾಡಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p>ಯಂತ್ರಡ್ಕದ ಅಬೂಬಕ್ಕರ್ ಸಿದ್ದಿಕ್ ಎಂಬುವರು ತನ್ನ ಮನೆಯವರೊಂದಿಗೆ ಮೂಡುಬಿದಿರೆಯ ಸಂಬಂಧಿಕರ ಮದುವೆಗೆಂದು ಹೋಗಿದ್ದರು. ಅವರು ವಾಪಸಾದಾಗ ಮನೆಯ ಕಪಾಟು ತೆರೆದುಕೊಂಡಿತ್ತು. ಪರಿಶೀಲಿಸಿದಾಗ ಕಪಾಟಿನಲ್ಲಿದ್ದ ₹ 58 ಸಾವಿರ ನಗದು, ₹ 70 ಸಾವಿರ ಮೌಲ್ಯದ 2 ಪವನ್ ಚಿನ್ನಾಭರಣಳು ಕಳವಾಗಿದ್ದವು. ಚಾವಣಿಯ ಹೆಂಚು ತೆಗೆದು ಕಳ್ಳರು ಒಳನುಗ್ಗಿದ್ದರು ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.</p>.<p><strong>ಹೆಚ್ಚುತ್ತಿರುವ ಕಳವು ಪ್ರಕರಣ:</strong> </p><p>ಕೆಲ ಸಮಯಗಳಿಂದ ಹಲವೆಡೆ ಕಳವು ಪ್ರಕರಣ ನಡೆಯುತ್ತಿದ್ದು, ಜನ ಆತಂಕದಲ್ಲಿದ್ದಾರೆ. ಕೆಲ ದಿನಗಳ ಹಿಂದೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೆಕ್ಕಿಲಾಡಿಯ 4 ಮನೆಗಳಲ್ಲಿ ಸರಣಿ ಕಳವು ನಡೆದಿತ್ತು. ಪೊಲೀಸ್ ಇಲಾಖೆ ಈ ಬಗ್ಗೆ ಹೆಚ್ಚಿನ ನಿಗಾ ಇರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>