ಕೇಂದ್ರ ಗುಪ್ತದಳ, ತೆಲಂಗಾಣದ ಭಯೋತ್ಪಾದನಾ ನಿಗ್ರಹ ದಳ (ಆಕ್ಟೋಪಸ್), ಮಹಾರಾಷ್ಟ್ರದ ವಿಚಾರವಾದಿಗಳಾದ ನರೇಂದ್ರ ದಾಭೋಲ್ಕರ್ ಮತ್ತು ಗೋವಿಂದ ಪಾನ್ಸರೆ ಹತ್ಯೆ ಪ್ರಕರಣಗಳ ತನಿಖೆ ನಡೆಸುತ್ತಿರುವ ಸಿಬಿಐ ಹಾಗೂ ಮಹಾರಾಷ್ಟ್ರ ಎಸ್ಐಟಿ ಅಧಿಕಾರಿಗಳು ಡಿಸಿಪಿ ಎಂ.ಎನ್.ಅನುಚೇತ್ ಅವರನ್ನು ಸೋಮವಾರ ಭೇಟಿಯಾಗಿ ಮಾಹಿತಿ ಪಡೆದಿದ್ದಾರೆ.