ಮಂಗಳೂರು ಪ್ರೆಸ್ ಕ್ಲಬ್ನಲ್ಲಿ ಶುಕ್ರವಾರ ನಡೆದ ಪತ್ರಿಕಾ ಸಂವಾದದಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ‘ಸದ್ಯ ಜಿಲ್ಲೆಯ ಗಡಿಗಳಲ್ಲಿ ನಿಗಾ ಇರಿಸಲಾಗಿದೆ. ವಿದೇಶಗಳಿಂದ ಬಂದವರನ್ನಷ್ಟೇ ತಪಾಸಣೆ ನಡೆಸಲಾಗುತ್ತಿದೆ. ಈವರೆಗೆ ಕೊರೊನಾ ವೈರಸ್ ಸೋಂಕು ತಗುಲಿರುವ ಯಾವುದೇ ಪ್ರಕರಣ ಜಿಲ್ಲೆಯಲ್ಲಿ ಪತ್ತೆಯಾಗಿಲ್ಲ. ಅಂತಹ ಪ್ರಕರಣಗಳು ವರದಿಯಾದರೆ, ಸೋಂಕು ಹಬ್ಬಲಾರಂಭಿಸಿದರೆ ಜಿಲ್ಲೆಯ ಗಡಿಗಳನ್ನು ಮುಚ್ಚುವ ಕುರಿತು ನಿರ್ಧಾರಕ್ಕೆ ಬರಲಾಗುವುದು’ ಎಂದರು.