<p><strong>ಉಜಿರೆ:</strong> ಬೆಳ್ತಂಗಡಿ ತಾಲ್ಲೂಕಿನ ಪಟ್ರಮೆ ಗ್ರಾಮದಲ್ಲಿ ಮಂಗಳವಾರ ಮರ ಕಡಿಯುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಅಡಿಗೆ ಬಿದ್ದು ಮೂವರು ಯುವಕರು ಮೃತಪಟ್ಟಿದ್ದಾರೆ.</p>.<p>ಪಟ್ರಮೆ ಗ್ರಾಮದ ರಾಮಣ್ಣ ಕುಂಬಾರ ಎಂಬವರ ಪುತ್ರ ಪ್ರಶಾಂತ್ (21), ಸೇಸಪ್ಪ ಪೂಜಾರಿ ಅವರ ಮಗ ಸ್ವಸ್ತಿಕ್ (23) ಮತ್ತು ಉಪ್ಪಿನಂಗಡಿ ನಿವಾಸಿ ಗಣೇಶ್ (38) ಮೃತರು.</p>.<p>ಪಟ್ರಮೆ ಗ್ರಾಮದ ಅನಾರು ಸಮೀಪದ ಕಾಯಿಲ ಲೋಕಯ್ಯ ಗೌಡರಿಗೆ ಸೇರಿದ ಸ್ಥಳದಲ್ಲಿದ್ದ ದೂಪದ ಮರವೊಂದನ್ನು ಕಡಿದು ಉರುಳಿಸುವ ವೇಳೆ, ಈ ದುರ್ಘಟನೆ ನಡೆದಿದೆ. ಈ ಸಂಬಂಧ ಧರ್ಮಸ್ಥಳ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ, ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಪವನ್ ನಾಯಕ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಜಿರೆ:</strong> ಬೆಳ್ತಂಗಡಿ ತಾಲ್ಲೂಕಿನ ಪಟ್ರಮೆ ಗ್ರಾಮದಲ್ಲಿ ಮಂಗಳವಾರ ಮರ ಕಡಿಯುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಅಡಿಗೆ ಬಿದ್ದು ಮೂವರು ಯುವಕರು ಮೃತಪಟ್ಟಿದ್ದಾರೆ.</p>.<p>ಪಟ್ರಮೆ ಗ್ರಾಮದ ರಾಮಣ್ಣ ಕುಂಬಾರ ಎಂಬವರ ಪುತ್ರ ಪ್ರಶಾಂತ್ (21), ಸೇಸಪ್ಪ ಪೂಜಾರಿ ಅವರ ಮಗ ಸ್ವಸ್ತಿಕ್ (23) ಮತ್ತು ಉಪ್ಪಿನಂಗಡಿ ನಿವಾಸಿ ಗಣೇಶ್ (38) ಮೃತರು.</p>.<p>ಪಟ್ರಮೆ ಗ್ರಾಮದ ಅನಾರು ಸಮೀಪದ ಕಾಯಿಲ ಲೋಕಯ್ಯ ಗೌಡರಿಗೆ ಸೇರಿದ ಸ್ಥಳದಲ್ಲಿದ್ದ ದೂಪದ ಮರವೊಂದನ್ನು ಕಡಿದು ಉರುಳಿಸುವ ವೇಳೆ, ಈ ದುರ್ಘಟನೆ ನಡೆದಿದೆ. ಈ ಸಂಬಂಧ ಧರ್ಮಸ್ಥಳ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ, ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಪವನ್ ನಾಯಕ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>