ಕಟ್ಟಡದ ಪಕ್ಕದಲ್ಲಿರುವ ನಿವೇಶನದಲ್ಲಿ ತರಕಾರಿ ವ್ಯಾಪಾರದ ಅಂಗಡಿಗಳಿದ್ದು, ಮಳೆ ಬಂದರೆ ವ್ಯಾಪಾರಸ್ಥರಿಗೆ ಯಾವುದೇ ಮೂಲಸೌಲಭ್ಯಗಳಿಲ್ಲ. ಪಟ್ಟಣದ ಮಾಂಸದ ಮಾರುಕಟ್ಟೆಗೂ ಸೂಕ್ತ ಸೌಲಭ್ಯ ಇಲ್ಲದ ಕಾರಣ ತರಕಾರಿ ಮಾರುಕಟ್ಟೆ ಸ್ಥಳಾಂತರಗೊಂಡಲ್ಲಿ ಆ ಸ್ಥಳದಲ್ಲಿ ಸುಸಜ್ಜಿತ ಮೀನು ಹಾಗೂ ಮಾಂಸದ ಅಂಗಡಿಗಳಿಗೆ ಮಾರುಕಟ್ಟೆ ಸೌಲಭ್ಯ ಕಲ್ಪಿಸಬಹುದು ಎಂಬುದು ನಾಗರಿಕರ ಆಗ್ರಹವಾಗಿದೆ.