‘ಮಂಗಳೂರು ವಿಶ್ವವಿದ್ಯಾಲಯವು ಕರಾವಳಿಯ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿಗೆ ಸಹಾಯಕವಾಗಿದೆ. ಆದರೆ ವಿಶ್ವವಿದ್ಯಾಲಯದ ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿದ ಬಳಿಕ ವೇಳಾಪಟ್ಟಿಯು ಜೂನ್ – ಜುಲೈವರೆಗೆ ವಿಸ್ತರಣೆಯಾಗಿದೆ. ಇದರಿಂದಾಗಿ ಶೈಕ್ಷಣಿಕ ಚಟುವಟಿಕೆಯು ಇಲ್ಲಿನ ಬೇಸಿಗೆಯ ಬಿಸಿಲಿನಿಂದ ದುಷ್ಪರಿಣಾಮವನ್ನು ಎದುರಿಸುವಂತಾಗಿದೆ. ಜೊತೆಗೆ ಕುಡಿಯುವ ನೀರಿನ ಸಮಸ್ಯೆ, ವಿದ್ಯುತ್ ಬಳಕೆ ಹೆಚ್ಚಳದಂತಹ ಸಮಸ್ಯೆಗಳನ್ನು ಇಲ್ಲಿನ ಕಾಲೇಜುಗಳು ಎದುರಿಸುತ್ತಿವೆ. ವಿವಿಧ ಕಾಲೇಜುಗಳ ಆಡಳಿತ ಮಂಡಳಿಗಳು, ಉಪನ್ಯಾಸಕರು, ಮತ್ತು ವಿದ್ಯಾರ್ಥಿ ಸಮುದಾಯದ ಮೇಲೂ ಇದರಿಂದ ದುಷ್ಪರಿಣಾಮ ಉಂಟಾಗಿದೆ. ಹಿಂದಿನ ವೇಳಾ ಪಟ್ಟಿ ಪ್ರಕಾರ ಶೈಕ್ಷಣಿಕ ಚಟುವಟಿಕೆ ಎಪ್ರಿಲ್ – ಮೇ ತಿಂಗಳುಗಳಲ್ಲಿ ಮುಗಿಯುತ್ತಿತ್ತು. ಅದು ಇಲ್ಲಿನ ವಾತಾವರಣಕ್ಕೆ ಪೂರಕವಾಗಿತ್ತು’ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.