ಮಹಾವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ ಅಧ್ಯಕ್ಷತೆ ವಹಿಸಿದ್ದರು. ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಟಿಪ್ಪು ಖಾಸಿಂ ಅಲಿ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮುನ್ನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಲ್ಫೇಡ್ ಡಿಸೋಜ, ನಿವೃತ್ತ ಪ್ರಾಧ್ಯಾಪಕ ಪಟ್ಟಾಭಿರಾಮ ಸೋಮಯಾಜಿ, ಕಾಂಗ್ರೆಸ್ ಮುಖಂಡರಾದ ಫಾರೂಕ್ ಉಳ್ಳಾಲ, ಇಕ್ಬಾಲ್ ಸಾಮಾನಿಗೆ, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ.ಕೆ. ಮಂಜನಾಡಿ, ಪತ್ರಕರ್ತ ಎ.ಕೆ.ಕುಕ್ಕಿಲ, ಉಳ್ಳಾಲ ನಗರಸಭೆಯ ಮಾಜಿ ಸದಸ್ಯ ಉಸ್ಮಾನ್ ಕಲ್ಲಾಪು, ವೇದಿಕೆಯ ಉಪಾಧ್ಯಕ್ಷ ವಿಷ್ಣುಮೂರ್ತಿ ಭಟ್, ಪ್ರಧಾನ ಕಾರ್ಯದರ್ಶಿ ನಝೀರ್ ಬಾರ್ಲಿ, ಹಿರಿಯ ಪತ್ರಕರ್ತ ವಿದ್ಯಾಧರ್ ಶೆಟ್ಟಿ ಇದ್ದರು. ಆರ್.ಕೆ.ಮದನಿ ಅಮ್ಮೆಂಬಳ ಸ್ವಾಗತಿಸಿದರು.