‘ಟೋಕನ್ ವಿತರಣೆಯಲ್ಲಿ ಶ್ರೀಮಂತರಿಗೆ ಮೊದಲ ಆದ್ಯತೆ ನೀಡಿ, ಬಡವರನ್ನು ಕಡೆಗಣಿಸಲಾಗಿದೆ. ಇದು ಸರಿಯಾದ ಕ್ರಮವಲ್ಲ’ ಎಂದು ನೆಟ್ಟಾಳ ಬಾಲಕೃಷ್ಣ ರೈ ಆಕ್ರೋಶ ವ್ಯಕ್ತಪಡಿಸಿದರು. ಕೋವಿಡ್ ಹರಡುವುದನ್ನು ನಿಯಂತ್ರಿಸಲು ಅಂತರ ಕಾಯ್ದುಕೊಳ್ಳ
ಬೇಕು ಎಂಬ ನಿಯಮವಿದ್ದರೂ, ಆಸ್ಪತ್ರೆಯಲ್ಲೇ ಈ ನಿಯಮ ಪಾಲನೆಯಾಗಲಿಲ್ಲ. ಬೇಕಾಬಿಟ್ಟಿಯಾಗಿ ಜನರು ಗುಂಪು ಸೇರುತ್ತಿರುವುದಕ್ಕೆ ಹಲವರು ಆಕ್ಷೇಪ ವ್ಯಕ್ತಪಡಿಸಿದರು.