ಎಂ.ಕೋಡಿ ಅಬ್ದುಲ್ ಖಾದರ್ ಜಿಲಾನಿ ಎಂಬುವರ ಮನೆಯ ಶೌಚಾಲಯ ಸ್ವಚ್ಛಗೊಳಿಸುವುದಕ್ಕೆ ಕಾರ್ಮಿಕರನ್ನು ಹುಡುಕುತ್ತಿದ್ದ ವೇಳೆ ಮನೆಗೆ ಕೆಲಸ ಕೇಳಿ ಬಂದಿದ್ದ ಸಂದೀಪ್ ಹಾಗೂ ವಾಸು ಎಂಬುವವರಿಗೆ ಶೌಚಾಲಯ ಶುಚಿಗೊಳಿಸುವ ಕೆಲಸ ವಹಿಸಲಾಗಿತ್ತು ಈ ವೇಳೆ ಸಂದೀಪ್ ಆಕಸ್ಮಿಕವಾಗಿ ಹೊಂಡಕ್ಕೆ ಬಿದ್ದು ಉಸಿರು ಕಟ್ಟಿ ಅಸ್ವಸ್ಥಗೊಂಡರು. ಸ್ಥಳೀಯರ ಸಹಕಾರದಿಂದ ಅವರನ್ನು ಮೇಲಕ್ಕೆ ಎತ್ತಿ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಿದರೂ ಅದು ಪ್ರಯೋಜನವಾಗಲಿಲ್ಲ ಎಂದು ತಿಳಿದು ಬಂದಿದೆ.