<p><strong>ಮಂಗಳೂರು:</strong> ಈ ಜಗತ್ತಿನಲ್ಲಿ ಕಡ್ಡಾಯವಾಗಿ ಓದಲೇಬೇಕು ಎಂಬುದು ಏನೂ ಇಲ್ಲ. ಮನಸ್ಸಿಗೆ ತಟ್ಟುವಂತದ್ದು ಅನ್ನುವುದು ಬಿಡಿ; ಸಾಹಿತ್ಯ ಮನಸ್ಸಿಗೆ ಮುಟ್ಟಿದರೆ ಸಾಕು ಎಂದು ಬಾಲಸುಬ್ರಹ್ಮಣ್ಯ ಕಂಜರ್ಪಣೆ ಹೇಳಿದರು.</p><p>ಇಲ್ಲಿಯ ಸೇಂಟ್ ಆಲೋಶಿಯಸ್ ಕಾಲೇಜಿನ ರಾಬರ್ಟ್ ಸೀಕ್ವೇರ ಸಭಾಂಗಣದಲ್ಲಿ ನಡೆದ ‘ಸಸಿ ಪ್ರಕಾಶನ’ದ ಕಥೆಗಾರ ಮುನವ್ವರ್ ಜೋಗಿಬೆಟ್ಟು ಅವರ ಎರಡನೇ ಕಥಾ ಸಂಕಲನ ‘ಟಚ್ ಮೀ ನಾಟ್’ ಲೋಕಾರ್ಪಣೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.</p><p>ಸುಧಾ ಆಡುಕಳಾ ಮಾತನಾಡಿ, ‘ಮುನವ್ವರ್ ಅವರ ಭಾಷೆ ಅದ್ಭುತವಾಗಿದ್ದು. ಅವರು ಆಯ್ದುಕೊಳ್ಳುವ ಕಥಾವಸ್ತುಗಳು ಅವರನ್ನು ಈ ಕಾಲದ ಗಟ್ಟಿ ಕಥೆಗಾರರ ಸಾಲಿನಲ್ಲಿ ನಿಲ್ಲಿಸುತ್ತವೆ’ ಎಂದರು.</p><p>ಕಥೆಗಾರ ಮುನವ್ವರ್ ಜೋಗಿಬೆಟ್ಟು ಮಾತನಾಡಿ, ‘ಜಗತ್ತಿನಲ್ಲಿರೋದು ಎರಡೇ ಜಾತಿ. ಒಂದು ಉಳ್ಳವರ ಜಾತಿ ಮತ್ತೊಂದು ಉಳ್ಳದೇ ಇರುವವರ ಜಾತಿ. ನನಗೆ ಮನುಷ್ಯನ ನೋವು ಕಾಡುತ್ತದೆ. ಆಗಾಗಿ ನನ್ನ ಕತೆಗಳು ನೋವಿನ ಕತೆಗಳಾಗಿವೆ’ ಎನ್ನುತ್ತ ಇತ್ತೀಚೆಗೆ ಕಳೆದುಕೊಂಡ ತಮ್ಮ ತಂದೆಯನ್ನು ನೆನಪಿಸಿಕೊಂಡರು.</p><p>ಪ್ರಕಾಶಕರಾದ ಜಯರಾಮಚಾರಿ, ‘ಮುನವ್ವರ್ ಕತೆಗಳು ಮನಸ್ಸನ್ನು ತಟ್ಟುತ್ತವೆ ಮತ್ತು ಮನಸ್ಸನ್ನು ಮುಟ್ಟುತ್ತವೆ’ ಎಂದರು. ಸೈಫ್ ಕಾರ್ಯಕ್ರಮ ನಿರೂಪಿಸಿದರು. ಜೋಗಿಬೆಟ್ಟು ಮಸೀದಿಯ ಪದಾಧಿಕಾರಿಗಳು ಮುನವ್ವರ್ ಅವರನ್ನು ಸನ್ಮಾನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಈ ಜಗತ್ತಿನಲ್ಲಿ ಕಡ್ಡಾಯವಾಗಿ ಓದಲೇಬೇಕು ಎಂಬುದು ಏನೂ ಇಲ್ಲ. ಮನಸ್ಸಿಗೆ ತಟ್ಟುವಂತದ್ದು ಅನ್ನುವುದು ಬಿಡಿ; ಸಾಹಿತ್ಯ ಮನಸ್ಸಿಗೆ ಮುಟ್ಟಿದರೆ ಸಾಕು ಎಂದು ಬಾಲಸುಬ್ರಹ್ಮಣ್ಯ ಕಂಜರ್ಪಣೆ ಹೇಳಿದರು.</p><p>ಇಲ್ಲಿಯ ಸೇಂಟ್ ಆಲೋಶಿಯಸ್ ಕಾಲೇಜಿನ ರಾಬರ್ಟ್ ಸೀಕ್ವೇರ ಸಭಾಂಗಣದಲ್ಲಿ ನಡೆದ ‘ಸಸಿ ಪ್ರಕಾಶನ’ದ ಕಥೆಗಾರ ಮುನವ್ವರ್ ಜೋಗಿಬೆಟ್ಟು ಅವರ ಎರಡನೇ ಕಥಾ ಸಂಕಲನ ‘ಟಚ್ ಮೀ ನಾಟ್’ ಲೋಕಾರ್ಪಣೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.</p><p>ಸುಧಾ ಆಡುಕಳಾ ಮಾತನಾಡಿ, ‘ಮುನವ್ವರ್ ಅವರ ಭಾಷೆ ಅದ್ಭುತವಾಗಿದ್ದು. ಅವರು ಆಯ್ದುಕೊಳ್ಳುವ ಕಥಾವಸ್ತುಗಳು ಅವರನ್ನು ಈ ಕಾಲದ ಗಟ್ಟಿ ಕಥೆಗಾರರ ಸಾಲಿನಲ್ಲಿ ನಿಲ್ಲಿಸುತ್ತವೆ’ ಎಂದರು.</p><p>ಕಥೆಗಾರ ಮುನವ್ವರ್ ಜೋಗಿಬೆಟ್ಟು ಮಾತನಾಡಿ, ‘ಜಗತ್ತಿನಲ್ಲಿರೋದು ಎರಡೇ ಜಾತಿ. ಒಂದು ಉಳ್ಳವರ ಜಾತಿ ಮತ್ತೊಂದು ಉಳ್ಳದೇ ಇರುವವರ ಜಾತಿ. ನನಗೆ ಮನುಷ್ಯನ ನೋವು ಕಾಡುತ್ತದೆ. ಆಗಾಗಿ ನನ್ನ ಕತೆಗಳು ನೋವಿನ ಕತೆಗಳಾಗಿವೆ’ ಎನ್ನುತ್ತ ಇತ್ತೀಚೆಗೆ ಕಳೆದುಕೊಂಡ ತಮ್ಮ ತಂದೆಯನ್ನು ನೆನಪಿಸಿಕೊಂಡರು.</p><p>ಪ್ರಕಾಶಕರಾದ ಜಯರಾಮಚಾರಿ, ‘ಮುನವ್ವರ್ ಕತೆಗಳು ಮನಸ್ಸನ್ನು ತಟ್ಟುತ್ತವೆ ಮತ್ತು ಮನಸ್ಸನ್ನು ಮುಟ್ಟುತ್ತವೆ’ ಎಂದರು. ಸೈಫ್ ಕಾರ್ಯಕ್ರಮ ನಿರೂಪಿಸಿದರು. ಜೋಗಿಬೆಟ್ಟು ಮಸೀದಿಯ ಪದಾಧಿಕಾರಿಗಳು ಮುನವ್ವರ್ ಅವರನ್ನು ಸನ್ಮಾನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>