<p><strong>ಉಳ್ಳಾಲ:</strong> ಮಾಡೂರಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಶಿಥಿಲಾವಸ್ಥೆ ತಲುಪಿದ್ದು, ಕೋಟೆಕಾರ್ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಮಾಲಿನಿ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ಶಾಲೆಗೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿತು.</p>.<p>ಈ ಶಾಲೆಯ ಕಟ್ಟಡ ಶಿಥಿಲವಾಗಿರುವ ಹಾಗೂ ಚಾವಣಿ ಸೋರುತ್ತಿರುವ ಬಗ್ಗೆ ‘ಪ್ರಜಾವಾಣಿ’ಯ ಸೋಮವಾರದ ಸಂಚಿಕೆಯಲ್ಲಿ ಪ್ರಕಟಗೊಂಡ ‘ಶಿಥಿಲಗೊಂಡ ಕಟ್ಟಡಗಳು– ಸರ್ಕಾರಿ ಶಾಲೆಗಳ ಅಳಲು’ ಎಂಬ ವಿಶೇಷ ವರದಿಯಲ್ಲಿ ಗಮನ ಸೆಳೆದಿತ್ತು. </p>.<p>‘ವಿದ್ಯಾರ್ಥಿಗಳು ಮಧ್ಯಾಹ್ನದ ಹೊತ್ತು ನೆಮ್ಮದಿಯಿಂದ ಕುಳಿತು ಊಟ ಮಾಡದಷ್ಟು ಶಾಲೆಯ ಕಟ್ಟಡ ಹದಗೆಟ್ಟಿದೆ. ಈ ಬಗ್ಗೆ ಶಾಲಾ ಉಸ್ತುವಾರಿ ಸಮಿತಿಯವರು ಗಮನಕ್ಕೆ ತಂದಿದ್ದಾರೆ. ಆದಷ್ಟು ತ್ವರಿತವಾಗಿ ಶಾಲಾ ಕಟ್ಟಡವನ್ನು ದುರಸ್ತಿಪಡಿಸಲು ಕ್ರಮವಹಿಸುವುದದಾಗಿ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಯವರು ಭರವಸೆ ನೀಡಿದ್ದಾರೆ’ ಎಂದು ಪಟ್ಟಣ ಪಂಚಾಯಿತಿಯ ಮಾಡೂರು 3ನೇ ವಾರ್ಡ್ನ ಸದಸ್ಯ ಸುಜಿತ್ ಮಾಡೂರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p>ಪಟ್ಟಣ ಪಂಚಾಯಿತಿಯ ಎಂಜಿನಿಯರ್ ದಿನೇಶ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಅಜೀಜ್ ಮಾಡೂರು, ಪ್ರಧಾನ ಕಾರ್ಯದರ್ಶಿ ಅರ್ಜುನ್ ಮಾಡೂರು, ಪಟ್ಟಣ ಪಂಚಾಯಿತಿ ಸದಸ್ಯ ಪ್ರವೀಣ್ ಬಗಂಬಿಲ ತಂಡದ ಜೊತೆಯಲ್ಲಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಳ್ಳಾಲ:</strong> ಮಾಡೂರಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಶಿಥಿಲಾವಸ್ಥೆ ತಲುಪಿದ್ದು, ಕೋಟೆಕಾರ್ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಮಾಲಿನಿ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ಶಾಲೆಗೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿತು.</p>.<p>ಈ ಶಾಲೆಯ ಕಟ್ಟಡ ಶಿಥಿಲವಾಗಿರುವ ಹಾಗೂ ಚಾವಣಿ ಸೋರುತ್ತಿರುವ ಬಗ್ಗೆ ‘ಪ್ರಜಾವಾಣಿ’ಯ ಸೋಮವಾರದ ಸಂಚಿಕೆಯಲ್ಲಿ ಪ್ರಕಟಗೊಂಡ ‘ಶಿಥಿಲಗೊಂಡ ಕಟ್ಟಡಗಳು– ಸರ್ಕಾರಿ ಶಾಲೆಗಳ ಅಳಲು’ ಎಂಬ ವಿಶೇಷ ವರದಿಯಲ್ಲಿ ಗಮನ ಸೆಳೆದಿತ್ತು. </p>.<p>‘ವಿದ್ಯಾರ್ಥಿಗಳು ಮಧ್ಯಾಹ್ನದ ಹೊತ್ತು ನೆಮ್ಮದಿಯಿಂದ ಕುಳಿತು ಊಟ ಮಾಡದಷ್ಟು ಶಾಲೆಯ ಕಟ್ಟಡ ಹದಗೆಟ್ಟಿದೆ. ಈ ಬಗ್ಗೆ ಶಾಲಾ ಉಸ್ತುವಾರಿ ಸಮಿತಿಯವರು ಗಮನಕ್ಕೆ ತಂದಿದ್ದಾರೆ. ಆದಷ್ಟು ತ್ವರಿತವಾಗಿ ಶಾಲಾ ಕಟ್ಟಡವನ್ನು ದುರಸ್ತಿಪಡಿಸಲು ಕ್ರಮವಹಿಸುವುದದಾಗಿ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಯವರು ಭರವಸೆ ನೀಡಿದ್ದಾರೆ’ ಎಂದು ಪಟ್ಟಣ ಪಂಚಾಯಿತಿಯ ಮಾಡೂರು 3ನೇ ವಾರ್ಡ್ನ ಸದಸ್ಯ ಸುಜಿತ್ ಮಾಡೂರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p>ಪಟ್ಟಣ ಪಂಚಾಯಿತಿಯ ಎಂಜಿನಿಯರ್ ದಿನೇಶ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಅಜೀಜ್ ಮಾಡೂರು, ಪ್ರಧಾನ ಕಾರ್ಯದರ್ಶಿ ಅರ್ಜುನ್ ಮಾಡೂರು, ಪಟ್ಟಣ ಪಂಚಾಯಿತಿ ಸದಸ್ಯ ಪ್ರವೀಣ್ ಬಗಂಬಿಲ ತಂಡದ ಜೊತೆಯಲ್ಲಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>