<p><strong>ಉಜಿರೆ: </strong>ಮಲವಂತಿಗೆ ಗ್ರಾಮದ ಬಂಗಾರ ಪಲ್ಕೆ ಜಲಪಾತದಲ್ಲಿ ಜನವರಿ 25 ರಂದು ಗುಡ್ಡ ಕುಸಿತದಿಂದ ಕಣ್ಮರೆಯಾಗಿದ್ದ ಕಾಶಿಬೆಟ್ಟು ನಿವಾಸಿ ಸನತ್ ಶೆಟ್ಟಿ(20) ಮೃತದೇಹ ಮಂಗಳವಾರ ಸಂಜೆ ಪತ್ತೆಯಾಗಿದೆ.</p>.<p>ಕಾಶಿಬೆಟ್ಟು ವಾಸುದೇವ ಶೆಟ್ಟಿ ಪುತ್ರ ಸನತ್ ಶೆಟ್ಟಿ ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ ಬಿ.ಎ ಎರಡನೇ ವರ್ಷದ ವಿದ್ಯಾರ್ಥಿಯಾಗಿದ್ದ. ಆತನ ಮೃತದೇಹ ಮಣ್ಣು ಮತ್ತು ಬಂಡೆಕಲ್ಲಿನಡಿ ಸಿಲುಕಿದ್ದರಿಂದ 22 ದಿನಗಳ ಸತತ ಕಾರ್ಯಾಚರಣೆ ಬಳಿಕ ಮಂಗಳವಾರ ಮೃತದೇಹ ಪತ್ತೆಯಾಗಿದೆ.</p>.<p>ಬಂಡೆ ಕಲ್ಲು ಒಡೆದು, ಜೆಸಿಬಿ ಮತ್ತು ಹಿಟಾಚಿ ಬಳಸಿ 22 ದಿನಗಳಲ್ಲಿ ಸುಮಾರು 30 ಅಡಿ ಆಳದ ಮಣ್ಣು ಮತ್ತು ಕಲ್ಲು ತೆರವುಗೊಳಿಸಲಾಗಿದೆ.</p>.<p>ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಕೆ.ವಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿಪ್ರಸಾದ ಸ್ಥಳಕ್ಕೆ ಭೇಟಿ ನೀಡಿದ್ದರು.</p>.<p>ಜಿಲ್ಲಾಡಳಿತ, ಶಾಸಕರು, ಅಗ್ನಿಶಾಮಕ ದಳ, ಕಂದಾಯ ಇಲಾಖೆ, ಎನ್.ಡಿ.ಆರ್.ಎಫ್. ತಂಡ, ಪೊಲೀಸ್ ಇಲಾಖೆ, ಸ್ಥಳೀಯ ಸೇವಾ ಕಾರ್ಯಕರ್ತರು ಸಹಕರಿಸಿದ್ದರು. ಒಂದೆರಡು ಸಲ ವಾಸನೆ ಬಂದಿತ್ತಾದರೂ ದೇಹ ಪತ್ತೆಯಾಗಿರಲಿಲ್ಲ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಜಿರೆ: </strong>ಮಲವಂತಿಗೆ ಗ್ರಾಮದ ಬಂಗಾರ ಪಲ್ಕೆ ಜಲಪಾತದಲ್ಲಿ ಜನವರಿ 25 ರಂದು ಗುಡ್ಡ ಕುಸಿತದಿಂದ ಕಣ್ಮರೆಯಾಗಿದ್ದ ಕಾಶಿಬೆಟ್ಟು ನಿವಾಸಿ ಸನತ್ ಶೆಟ್ಟಿ(20) ಮೃತದೇಹ ಮಂಗಳವಾರ ಸಂಜೆ ಪತ್ತೆಯಾಗಿದೆ.</p>.<p>ಕಾಶಿಬೆಟ್ಟು ವಾಸುದೇವ ಶೆಟ್ಟಿ ಪುತ್ರ ಸನತ್ ಶೆಟ್ಟಿ ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ ಬಿ.ಎ ಎರಡನೇ ವರ್ಷದ ವಿದ್ಯಾರ್ಥಿಯಾಗಿದ್ದ. ಆತನ ಮೃತದೇಹ ಮಣ್ಣು ಮತ್ತು ಬಂಡೆಕಲ್ಲಿನಡಿ ಸಿಲುಕಿದ್ದರಿಂದ 22 ದಿನಗಳ ಸತತ ಕಾರ್ಯಾಚರಣೆ ಬಳಿಕ ಮಂಗಳವಾರ ಮೃತದೇಹ ಪತ್ತೆಯಾಗಿದೆ.</p>.<p>ಬಂಡೆ ಕಲ್ಲು ಒಡೆದು, ಜೆಸಿಬಿ ಮತ್ತು ಹಿಟಾಚಿ ಬಳಸಿ 22 ದಿನಗಳಲ್ಲಿ ಸುಮಾರು 30 ಅಡಿ ಆಳದ ಮಣ್ಣು ಮತ್ತು ಕಲ್ಲು ತೆರವುಗೊಳಿಸಲಾಗಿದೆ.</p>.<p>ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಕೆ.ವಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿಪ್ರಸಾದ ಸ್ಥಳಕ್ಕೆ ಭೇಟಿ ನೀಡಿದ್ದರು.</p>.<p>ಜಿಲ್ಲಾಡಳಿತ, ಶಾಸಕರು, ಅಗ್ನಿಶಾಮಕ ದಳ, ಕಂದಾಯ ಇಲಾಖೆ, ಎನ್.ಡಿ.ಆರ್.ಎಫ್. ತಂಡ, ಪೊಲೀಸ್ ಇಲಾಖೆ, ಸ್ಥಳೀಯ ಸೇವಾ ಕಾರ್ಯಕರ್ತರು ಸಹಕರಿಸಿದ್ದರು. ಒಂದೆರಡು ಸಲ ವಾಸನೆ ಬಂದಿತ್ತಾದರೂ ದೇಹ ಪತ್ತೆಯಾಗಿರಲಿಲ್ಲ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>