<p><strong>ಮಂಗಳೂರು:</strong> ಯಡಕುಮೇರಿ ಮತ್ತು ಶಿರಿಬಾಗಿಲು ನಡುವೆ ರೈಲು ಹಳಿ ಮೇಲೆ ಶನಿವಾರ ಮುಂಜಾನೆ 4.23ಕ್ಕೆ ಬಂಡೆಗಳು ಉರುಳಿದ್ದರಿಂದ ಮೂರು ರೈಲುಗಳನ್ನು ನಿಲ್ದಾಣಗಳಲ್ಲಿ ಕೆಲ ಕಾಲ ನಿಲ್ಲಿಸಲಾಯಿತು.</p><p>ಬೆಂಗಳೂರು ಸೆಂಟ್ರಲ್ (ಕೆಎಸ್ಆರ್) - ಕಣ್ಣೂರು ಎಕ್ಸ್ಪ್ರೆಸ್ (ನಂ16511) ರೈಲನ್ನು ಕಡಗರವಳ್ಳಿ ನಿಲ್ದಾಣದಲ್ಲಿ, ಬೆಂಗಳೂರು- ಮುರ್ಡೇಶ್ಬರ ಎಕ್ಸ್ಪ್ರೆಸ್ (ನಂ 16585) ಮತ್ತು ವಿಜಯಪುರ - ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ (07377) ರೈಲನ್ನು ಸಕಲೇಶಪುರ ನಿಲ್ದಾಣದಲ್ಲಿ ನಿಲುಗಡೆ ಮಾಡಲಾಗಿತ್ತು. </p><p>ಹಳಿಗೆ ಬಿದ್ದ ಬಂಡೆ ಮತ್ತು ಮಣ್ಣನ್ನು ತೆರವುಗೊಳಿಸಲಾಗಿದೆ. ರೈಲುಗಳು ಬೆಳಿಗ್ಗೆ 9 ಗಂಟೆ 10 ನಿಮಿಷದ ಬಳಿಕ ಈ ಹಳಿಯಲ್ಲಿ ಗಂಟೆಗೆ 20 ಕಿ.ಮೀ ವೇಗದಲ್ಲಿ ಸಂಚರಿಸಲು ಅನುವು ಮಾಡಿಕೊಡಲಾಗಿದೆ. ನಿಲ್ದಾಣಗಳಲ್ಲಿ ನಿಲ್ಲಿಸಲಾಗಿದ್ದ ರೈಲುಗಳು ಪ್ರಯಾಣ ಮುಂದುವರಿಸಿವೆ.</p><p>ನಿಲ್ದಾಣದಲ್ಲಿ ತಾಸು ಗಟ್ಟಲೆ ಕಾಯಬೇಕಾಗಿ ಬಂದಿದ್ದರಿಂದ ಪ್ರಯಾಣಿಕರಿಗೆ ಉಪಾಹಾರ, ಬಿಸ್ಕೆಟ್, ಚಹಾ ಕುಡಿಯುವ ನೀರು ಪೂರೈಕೆಗೆ ವ್ಯವಸ್ಥೆ ಕಲ್ಪಿಸಲಾಗಿತ್ತು ಎಂದು ನೈರುತ್ಯ ರೈಲ್ವೆಯ ಪ್ರಕಟಣೆ ತಿಳಿಸಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಯಡಕುಮೇರಿ ಮತ್ತು ಶಿರಿಬಾಗಿಲು ನಡುವೆ ರೈಲು ಹಳಿ ಮೇಲೆ ಶನಿವಾರ ಮುಂಜಾನೆ 4.23ಕ್ಕೆ ಬಂಡೆಗಳು ಉರುಳಿದ್ದರಿಂದ ಮೂರು ರೈಲುಗಳನ್ನು ನಿಲ್ದಾಣಗಳಲ್ಲಿ ಕೆಲ ಕಾಲ ನಿಲ್ಲಿಸಲಾಯಿತು.</p><p>ಬೆಂಗಳೂರು ಸೆಂಟ್ರಲ್ (ಕೆಎಸ್ಆರ್) - ಕಣ್ಣೂರು ಎಕ್ಸ್ಪ್ರೆಸ್ (ನಂ16511) ರೈಲನ್ನು ಕಡಗರವಳ್ಳಿ ನಿಲ್ದಾಣದಲ್ಲಿ, ಬೆಂಗಳೂರು- ಮುರ್ಡೇಶ್ಬರ ಎಕ್ಸ್ಪ್ರೆಸ್ (ನಂ 16585) ಮತ್ತು ವಿಜಯಪುರ - ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ (07377) ರೈಲನ್ನು ಸಕಲೇಶಪುರ ನಿಲ್ದಾಣದಲ್ಲಿ ನಿಲುಗಡೆ ಮಾಡಲಾಗಿತ್ತು. </p><p>ಹಳಿಗೆ ಬಿದ್ದ ಬಂಡೆ ಮತ್ತು ಮಣ್ಣನ್ನು ತೆರವುಗೊಳಿಸಲಾಗಿದೆ. ರೈಲುಗಳು ಬೆಳಿಗ್ಗೆ 9 ಗಂಟೆ 10 ನಿಮಿಷದ ಬಳಿಕ ಈ ಹಳಿಯಲ್ಲಿ ಗಂಟೆಗೆ 20 ಕಿ.ಮೀ ವೇಗದಲ್ಲಿ ಸಂಚರಿಸಲು ಅನುವು ಮಾಡಿಕೊಡಲಾಗಿದೆ. ನಿಲ್ದಾಣಗಳಲ್ಲಿ ನಿಲ್ಲಿಸಲಾಗಿದ್ದ ರೈಲುಗಳು ಪ್ರಯಾಣ ಮುಂದುವರಿಸಿವೆ.</p><p>ನಿಲ್ದಾಣದಲ್ಲಿ ತಾಸು ಗಟ್ಟಲೆ ಕಾಯಬೇಕಾಗಿ ಬಂದಿದ್ದರಿಂದ ಪ್ರಯಾಣಿಕರಿಗೆ ಉಪಾಹಾರ, ಬಿಸ್ಕೆಟ್, ಚಹಾ ಕುಡಿಯುವ ನೀರು ಪೂರೈಕೆಗೆ ವ್ಯವಸ್ಥೆ ಕಲ್ಪಿಸಲಾಗಿತ್ತು ಎಂದು ನೈರುತ್ಯ ರೈಲ್ವೆಯ ಪ್ರಕಟಣೆ ತಿಳಿಸಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>