ರೈಲ್ವೆ ಹಳಿಯ ಮೇಲೆ ಬಿದ್ದಿದ್ದ ಮಣ್ಣು, ಕಲ್ಲಿನ ರಾಶಿಯನ್ನು 15 ದಿನಗಳ ಸತತ ಕಾರ್ಯಾಚರಣೆ ಮೂಲಕ ತೆರವು ಮಾಡಲಾಗಿದೆ. ಹಳಿಯ ಅಡಿಯಲ್ಲಿ ಮಣ್ಣು ಕೊಚ್ಚಿಹೋಗಿದ್ದ ಸ್ಥಳಗಳಲ್ಲೂ ದುರಸ್ತಿ ಮಾಡಲಾಗಿದೆ. 55 ಕಿಲೋ ಮೀಟರ್ ಉದ್ದದ ಮಾರ್ಗ ಈಗ ರೈಲು ಸಂಚಾರಕ್ಕೆ ಸಂಪೂರ್ಣ ಸಿದ್ಧವಾಗಿದೆ. ಭಾನುವಾರದಿಂದಲೇ ಈ ಮಾರ್ಗದಲ್ಲಿ ರೈಲುಗಳ ಸಂಚಾರ ಪುನರಾರಂಭ ಮಾಡಲಾಗಿದೆ ಎಂದು ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ಹಿರಿಯ ವಿಭಾಗೀಯ ಕಾರ್ಯನಿರ್ವಹಣಾ ವ್ಯವಸ್ಥಾಪಕ ಸತೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.