<p><strong>ಪುತ್ತೂರು:</strong> ಇಲ್ಲಿನ ಐಸಿಎಆರ್- ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಶನಿವಾರ ಪಿಎಂ-ಕಿಸಾನ್ ಉತ್ಸವದ ಭಾಗವಾಗಿ ‘ಗೇರಿನ ವೈಜ್ಞಾನಿಕ ಕೃಷಿ’ ಕುರಿತ ತರಬೇತಿ ಕಾರ್ಯಕ್ರಮ ನಡೆಯಿತು.</p>.<p>ಕಾರ್ಯಕ್ರಮದ ಬಳಿಕ ಪರಿಶಿಷ್ಟ ಪಂಗಡದ ರೈತರಿಗೆ ಸಸಿ ವಿತರಿಸಲಾಯಿತು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉತ್ತರಪ್ರದೇಶದ ವಾರಾಣಸಿಯಿಂದ ಪಿಎಂ-ಕಿಸಾನ್ 20ನೇ ಹಣಕಾಸು ಕಂತನ್ನು ಬಿಡುಗಡೆ ಮಾಡಿದ್ದು, ಆ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲಾಯಿತು.</p>.<p>ಪುತ್ತೂರಿನ ಐಸಿಎಆರ್-ಡಿಸಿಆರ್ನ ಪ್ರಧಾನ ನಿರ್ದೇಶಕ ಟಿ.ವಿ.ರವಿಪ್ರಸಾದ್ ಮಾತನಾಡಿ, ದೇಶಕ್ಕೆ ಹೆಚ್ಚು ಮಹತ್ವಾಕಾಂಕ್ಷೆಯ ಆರ್ಥಿಕ ಗುರಿ ಸಾಧಿಸಲು ರೈತರ ಪಾಲ್ಗೊಳ್ಳುವಿಕೆ ಮುಖ್ಯ ಎಂದರು.</p>.<p>ಗೇರು ಕೃಷಿಯ ಬಗ್ಗೆ ರೈತರಿಗೆ ಶಿಕ್ಷಣ ನೀಡುವ ಕುರಿತು ಚರ್ಚೆ ನಡೆಸಿದರು.</p>.<p>ಗೇರು ಕೃಷಿ ಬಗ್ಗೆ ಅರಿವು ಮೂಡಿಸಲು ತಾಂತ್ರಿಕ ತರಬೇತಿ ನಡೆಯಿತು. ಸಸ್ಯ ತಳಿ ಅಭಿವೃದ್ಧಿ ವಿಭಾಗದ ಹಿರಿಯ ವಿಜ್ಞಾನಿ ಈರದಾಸಪ್ಪ ಅವರು ಮಾಹಿತಿ ನೀಡಿದರು.</p>.<p>ಸಂಬಾರ, ತೋಟ, ಔಷಧೀಯ ಮತ್ತು ಆರೊಮ್ಯಾಟಿಕ್ಸ್ ಸಸ್ಯಗಳು ವಿಭಾಗದ ವಿಜ್ಞಾನಿ ಮಂಜೇಶ್ ಜಿ. ಎನ್., ಕೃಷಿ ಕೀಟಶಾಸ್ತ್ರ ವಿಭಾಗದ ಹಿರಿಯ ವಿಜ್ಞಾನಿ ವನಿತಾ ಕೆ., ಸಸ್ಯರೋಗ ಶಾಸ್ತ್ರ ವಿಭಾಗದ ಹಿರಿಯ ವಿಜ್ಞಾನಿ ರಾಜಶೇಖರ ಎಚ್. ಉಪನ್ಯಾಸ ನೀಡಿದರು.</p>.<p>ಕೃಷಿ ಮತ್ತು ನಿರ್ವಹಣೆ ಸಮಯದಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ವಿಜ್ಞಾನಿಗಳು ಸಂವಾದ ನಡೆಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು:</strong> ಇಲ್ಲಿನ ಐಸಿಎಆರ್- ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಶನಿವಾರ ಪಿಎಂ-ಕಿಸಾನ್ ಉತ್ಸವದ ಭಾಗವಾಗಿ ‘ಗೇರಿನ ವೈಜ್ಞಾನಿಕ ಕೃಷಿ’ ಕುರಿತ ತರಬೇತಿ ಕಾರ್ಯಕ್ರಮ ನಡೆಯಿತು.</p>.<p>ಕಾರ್ಯಕ್ರಮದ ಬಳಿಕ ಪರಿಶಿಷ್ಟ ಪಂಗಡದ ರೈತರಿಗೆ ಸಸಿ ವಿತರಿಸಲಾಯಿತು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉತ್ತರಪ್ರದೇಶದ ವಾರಾಣಸಿಯಿಂದ ಪಿಎಂ-ಕಿಸಾನ್ 20ನೇ ಹಣಕಾಸು ಕಂತನ್ನು ಬಿಡುಗಡೆ ಮಾಡಿದ್ದು, ಆ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲಾಯಿತು.</p>.<p>ಪುತ್ತೂರಿನ ಐಸಿಎಆರ್-ಡಿಸಿಆರ್ನ ಪ್ರಧಾನ ನಿರ್ದೇಶಕ ಟಿ.ವಿ.ರವಿಪ್ರಸಾದ್ ಮಾತನಾಡಿ, ದೇಶಕ್ಕೆ ಹೆಚ್ಚು ಮಹತ್ವಾಕಾಂಕ್ಷೆಯ ಆರ್ಥಿಕ ಗುರಿ ಸಾಧಿಸಲು ರೈತರ ಪಾಲ್ಗೊಳ್ಳುವಿಕೆ ಮುಖ್ಯ ಎಂದರು.</p>.<p>ಗೇರು ಕೃಷಿಯ ಬಗ್ಗೆ ರೈತರಿಗೆ ಶಿಕ್ಷಣ ನೀಡುವ ಕುರಿತು ಚರ್ಚೆ ನಡೆಸಿದರು.</p>.<p>ಗೇರು ಕೃಷಿ ಬಗ್ಗೆ ಅರಿವು ಮೂಡಿಸಲು ತಾಂತ್ರಿಕ ತರಬೇತಿ ನಡೆಯಿತು. ಸಸ್ಯ ತಳಿ ಅಭಿವೃದ್ಧಿ ವಿಭಾಗದ ಹಿರಿಯ ವಿಜ್ಞಾನಿ ಈರದಾಸಪ್ಪ ಅವರು ಮಾಹಿತಿ ನೀಡಿದರು.</p>.<p>ಸಂಬಾರ, ತೋಟ, ಔಷಧೀಯ ಮತ್ತು ಆರೊಮ್ಯಾಟಿಕ್ಸ್ ಸಸ್ಯಗಳು ವಿಭಾಗದ ವಿಜ್ಞಾನಿ ಮಂಜೇಶ್ ಜಿ. ಎನ್., ಕೃಷಿ ಕೀಟಶಾಸ್ತ್ರ ವಿಭಾಗದ ಹಿರಿಯ ವಿಜ್ಞಾನಿ ವನಿತಾ ಕೆ., ಸಸ್ಯರೋಗ ಶಾಸ್ತ್ರ ವಿಭಾಗದ ಹಿರಿಯ ವಿಜ್ಞಾನಿ ರಾಜಶೇಖರ ಎಚ್. ಉಪನ್ಯಾಸ ನೀಡಿದರು.</p>.<p>ಕೃಷಿ ಮತ್ತು ನಿರ್ವಹಣೆ ಸಮಯದಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ವಿಜ್ಞಾನಿಗಳು ಸಂವಾದ ನಡೆಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>