ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ತವ್ಯ ಪ್ರಜ್ಞೆಯಿಂದ ಮಾನಸಿಕ ತೃಪ್ತಿ: ಹೆಗ್ಗಡೆ

Last Updated 19 ನವೆಂಬರ್ 2021, 16:00 IST
ಅಕ್ಷರ ಗಾತ್ರ

ಉಜಿರೆ: ‘ಪ್ರತಿಯೊಬ್ಬರು ತಮ್ಮ ಕೆಲಸವನ್ನು ಕರ್ತವ್ಯ ಪ್ರಜ್ಞೆಯಿಂದ ಮಾಡಿದಾಗ ಮಾನಸಿಕ ಶಾಂತಿ, ತೃಪ್ತಿ ಹಾಗೂ ಸಂತೋಷ ಸಿಗುತ್ತದೆ’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ವಿಪತ್ತು ಸೇವಾ ಸಮಿತಿಯ ಸಂಯೋಜಕರಿಗೆ ನಡೆದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಹೇಮಾವತಿ ಹೆಗ್ಗಡೆ ಮಾತನಾಡಿ ಶೌರ್ಯ ತಂಡದ ಸದಸ್ಯರು ವಿಪತ್ತಿನ ಸಂದರ್ಭ ಅನೇಕ ಮಂದಿಯನ್ನು ಪ್ರಾಣಾಪಾಯದಿಂದ ರಕ್ಷಿಸಿದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್, ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್, ಪ್ರಾದೇಶಿಕ ನಿರ್ದೇಶಕ ಜಯಶಂಕರ ಶರ್ಮ ಇದ್ದರು.

’ರಾಜ್ಯದ 32 ತಾಲ್ಲೂಕುಗಳಲ್ಲಿ ಶೌರ್ಯ ವಿಪತ್ತು ನಿರ್ವಹಣ ಘಟಕಗಳನ್ನು ಈಗಾಗಲೆ ಪ್ರಾರಂಭಿಸಲಾಗಿದೆ. 270 ಸಂಯೋಜಕರು ಹಾಗೂ 2,780 ಸ್ವಯಂ ಸೇವಕರಿಗೆ ತರಬೇತಿ ನೀಡಿದ್ದು ಸ್ಥಳೀಯವಾಗಿ ಯಾವುದೇ ವಿಕೋಪ, ಅಪಘಾತ ಸಂಭವಿಸಿದಾಗ ಅವರು ಸದಾ ಸೇವೆಗೆ ಸಿದ್ಧದರಾಗಿದ್ದಾರೆ’ ಎಂದು ಪ್ರಾದೇಶಿಕ ನಿರ್ದೇಶಕ ವಿವೇಕ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT