<p><strong>ಮಂಗಳೂರು:</strong> ಲಿಂಗತ್ವ ಅಲ್ಪಸಂಖ್ಯಾತರ ಸಂಘಟನೆ ‘ನವಸಹಜ ಸಮುದಾಯ’ದ 7ನೇ ವಾರ್ಷಿಕ ಮಹಾಸಭೆ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ‘ನವಸಹಜ ಮಿಸ್ ಟ್ರಾನ್ಸ್ ತುಳುನಾಡು’ ಇದೇ 9ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.</p>.<p>‘ಅಂದು ಬೆಳಿಗ್ಗೆ 9.30ಕ್ಕೆ ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ಕಾರ್ಯಕ್ರಮ ಉದ್ಘಾಟಿಸಲಿರುವರು ಎಂದು ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಅಧ್ಯಕ್ಷ ಪ್ರವೀಣ್ ನಿಖಿಲ್ ತಿಳಿಸಿದರು.</p>.<p>‘ಸುಮಾರು 1,672 ಲಿಂಗತ್ವ ಅಲ್ಪಸಂಖ್ಯಾತರು ಜಿಲ್ಲೆಯಲ್ಲಿದ್ದು, ಸಂಘಟನೆಯು 250 ಮಂದಿ ಸದಸ್ಯರನ್ನು ಹೊಂದಿದೆ. ಸಮುದಾಯಕ್ಕೆ ಸರಕಾರದಿಂದ ಸಿಗುವ ಸವಲತ್ತುಗಳನ್ನು ಒದಗಿಸುವುದು ಹಾಗೂ ಸದಸ್ಯರಿಗೆ ಎದುರಾಗುವ ಸಮಸ್ಯೆಗಳ ಪರಿಹಾರಕ್ಕಾಗಿ ಪ್ರಯತ್ನಿಸುತ್ತಿದೆ’ ಎಂದರು.</p>.<p>‘ಲಿಂಗತ್ವ ಅಲ್ಪಸಂಖ್ಯಾತರಲ್ಲಿಯೂ ಸಾಕಷ್ಟು ವಿಧಗಳಿದ್ದು, ಹಲವು ಮಂದಿ ಹಲವು ಕಾರಣಗಳಿಂದ ಇನ್ನೂ ಸಮಾಜದ ಮುಖ್ಯವಾಹಿನಿಗೆ ಬರುವಲ್ಲಿ ಹಿಂದೇಟು ಹಾಕಿ ತೆರೆಮರೆಯಲ್ಲೇ ಉಳಿದುಕೊಂಡಿದ್ದಾರೆ. ಸಮಾಜವೂ ಈ ಲಿಂಗತ್ವ ಅಲ್ಪಸಂಖ್ಯಾತರನ್ನು ತಾರತಮ್ಯದ ದೃಷ್ಟಿಯಿಂದ ನೋಡುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಸಾಕಷ್ಟು ಮಂದಿಗೆ ಇನ್ನೂ ಲಿಂಗತ್ವ ಅಲ್ಪಸಂಖ್ಯಾತ ಗುರುತಿನ ಚೀಟಿ ಲಭ್ಯವಾಗಿಲ್ಲ. ಈಬಗ್ಗೆ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಮನವಿ ಮಾಡಲಾಗಿದೆ. ಅವರು ಸಲಹಾ ಸಮಿತಿ ರಚಿಸಿ ತಹಶೀಲ್ದಾರ್ ಮೂಲಕ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ’ ಎಂದು ಸಂಘಟನೆಯ ಸದಸ್ಯ ಸಂತೋಷ್ ತಿಳಿಸಿದರು.</p>.<p>ಸದಸ್ಯರಾದ ರಾಜೇಶ್, ಪ್ರೇಮಾ, ನಯನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಲಿಂಗತ್ವ ಅಲ್ಪಸಂಖ್ಯಾತರ ಸಂಘಟನೆ ‘ನವಸಹಜ ಸಮುದಾಯ’ದ 7ನೇ ವಾರ್ಷಿಕ ಮಹಾಸಭೆ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ‘ನವಸಹಜ ಮಿಸ್ ಟ್ರಾನ್ಸ್ ತುಳುನಾಡು’ ಇದೇ 9ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.</p>.<p>‘ಅಂದು ಬೆಳಿಗ್ಗೆ 9.30ಕ್ಕೆ ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ಕಾರ್ಯಕ್ರಮ ಉದ್ಘಾಟಿಸಲಿರುವರು ಎಂದು ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಅಧ್ಯಕ್ಷ ಪ್ರವೀಣ್ ನಿಖಿಲ್ ತಿಳಿಸಿದರು.</p>.<p>‘ಸುಮಾರು 1,672 ಲಿಂಗತ್ವ ಅಲ್ಪಸಂಖ್ಯಾತರು ಜಿಲ್ಲೆಯಲ್ಲಿದ್ದು, ಸಂಘಟನೆಯು 250 ಮಂದಿ ಸದಸ್ಯರನ್ನು ಹೊಂದಿದೆ. ಸಮುದಾಯಕ್ಕೆ ಸರಕಾರದಿಂದ ಸಿಗುವ ಸವಲತ್ತುಗಳನ್ನು ಒದಗಿಸುವುದು ಹಾಗೂ ಸದಸ್ಯರಿಗೆ ಎದುರಾಗುವ ಸಮಸ್ಯೆಗಳ ಪರಿಹಾರಕ್ಕಾಗಿ ಪ್ರಯತ್ನಿಸುತ್ತಿದೆ’ ಎಂದರು.</p>.<p>‘ಲಿಂಗತ್ವ ಅಲ್ಪಸಂಖ್ಯಾತರಲ್ಲಿಯೂ ಸಾಕಷ್ಟು ವಿಧಗಳಿದ್ದು, ಹಲವು ಮಂದಿ ಹಲವು ಕಾರಣಗಳಿಂದ ಇನ್ನೂ ಸಮಾಜದ ಮುಖ್ಯವಾಹಿನಿಗೆ ಬರುವಲ್ಲಿ ಹಿಂದೇಟು ಹಾಕಿ ತೆರೆಮರೆಯಲ್ಲೇ ಉಳಿದುಕೊಂಡಿದ್ದಾರೆ. ಸಮಾಜವೂ ಈ ಲಿಂಗತ್ವ ಅಲ್ಪಸಂಖ್ಯಾತರನ್ನು ತಾರತಮ್ಯದ ದೃಷ್ಟಿಯಿಂದ ನೋಡುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಸಾಕಷ್ಟು ಮಂದಿಗೆ ಇನ್ನೂ ಲಿಂಗತ್ವ ಅಲ್ಪಸಂಖ್ಯಾತ ಗುರುತಿನ ಚೀಟಿ ಲಭ್ಯವಾಗಿಲ್ಲ. ಈಬಗ್ಗೆ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಮನವಿ ಮಾಡಲಾಗಿದೆ. ಅವರು ಸಲಹಾ ಸಮಿತಿ ರಚಿಸಿ ತಹಶೀಲ್ದಾರ್ ಮೂಲಕ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ’ ಎಂದು ಸಂಘಟನೆಯ ಸದಸ್ಯ ಸಂತೋಷ್ ತಿಳಿಸಿದರು.</p>.<p>ಸದಸ್ಯರಾದ ರಾಜೇಶ್, ಪ್ರೇಮಾ, ನಯನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>