<p><strong>ಪುತ್ತೂರು</strong>: ಭಾನುವಾರ ಮಧ್ಯಾಹ್ನ ಬೀಸಿದ ಗಾಳಿಯಿಂದಾಗಿ ಪುತ್ತೂರು ಗ್ರಾಮಾಂತರ ವ್ಯಾಪ್ತಿಯ ವಿವಿಧೆಡೆ ಮರಗಳು ಉರುಳಿ ವಿದ್ಯುತ್ ಪೂರೈಕೆ ಮತ್ತು ರಸ್ತೆ ಸಂಚಾರಕ್ಕೆ ಅಡಚಣೆಯಾಗಿತ್ತು.</p>.<p>ಕಾವು-ಈಶ್ವರಮಂಗಲ-ಪಳ್ಳತ್ತೂರು ಅಂತರರಾಜ್ಯ ಸಂಪರ್ಕ ರಸ್ತೆಗೆ ವಿವಿಧೆಡೆ ಮರಗಳು ಉರುಳಿದ್ದವು.</p>.<p>ಈಶ್ವರಮಂಗಲ ಪೊಲೀಸ್ ಹೊರ ಠಾಣೆಯ ಸಮೀಪ ಈಶ್ವರಮಂಗಲ-ಪಳ್ಳತ್ತೂರು ರಸ್ತೆಯ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿದೆ. ಅಲ್ಲಿದ್ದ ವಿದ್ಯುತ್ ಕಂಬಕ್ಕೆ ಹಾನಿಯಾಗಿದೆ.</p>.<p>ಕಾವು-ಈಶ್ವರಮಂಗಲ ರಸ್ತೆಯ ನೂಜಿಬೈಲು ಎಂಬಲ್ಲಿ, ನೆಲ್ಲಿತ್ತಡ್ಕ ಬಳಿ, ಈಶ್ವರಮಂಗಲ-ಪಳ್ಳತ್ತೂರು ರಸ್ತೆಯ ಮೇನಾಲ ಸಮೀಪ ಮರ ಉರುಳಿದೆ. ಕೆಲವೆಡೆ ಅಡಿಕೆ ಮರಗಳು ಧಾರಾಶಾಹಿಯಾಗಿದ್ದು, ಹಲವಾರು ಮಂದಿ ಕೃಷಿಕರಿಗೆ ನಷ್ಟವುಂಟಾಗಿದೆ.</p>.<p><strong>ರಸ್ತೆ ಸಂಚಾರಕ್ಕೆ ತೊಂದರೆ</strong></p>.<p><strong>ಸುಳ್ಯ</strong>: ಇಲ್ಲಿಂದ ಕೇರಳದ ಕಾಞಂಗಾಡ್ ಬಂದಡ್ಕ ಸಂಪರ್ಕದ ಅಂತರರಾಜ್ಯ ರಸ್ತೆಯಲ್ಲಿ ಕನ್ನಡಿತೋಡು ಎಂಬಲ್ಲಿ ರಸ್ತೆಗೆ ಭಾರಿ ಗಾತ್ರದ ಮತ ಬಿದ್ದು ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಎರಡೂ ಭಾಗದಲ್ಲಿ ವಾಹನಗಳ ಸರತಿ ಸಾಲು ಉಂಟಾಗಿತ್ತು. ಮರದ ತೆರವು ಕಾರ್ಯಾಚರಣೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು</strong>: ಭಾನುವಾರ ಮಧ್ಯಾಹ್ನ ಬೀಸಿದ ಗಾಳಿಯಿಂದಾಗಿ ಪುತ್ತೂರು ಗ್ರಾಮಾಂತರ ವ್ಯಾಪ್ತಿಯ ವಿವಿಧೆಡೆ ಮರಗಳು ಉರುಳಿ ವಿದ್ಯುತ್ ಪೂರೈಕೆ ಮತ್ತು ರಸ್ತೆ ಸಂಚಾರಕ್ಕೆ ಅಡಚಣೆಯಾಗಿತ್ತು.</p>.<p>ಕಾವು-ಈಶ್ವರಮಂಗಲ-ಪಳ್ಳತ್ತೂರು ಅಂತರರಾಜ್ಯ ಸಂಪರ್ಕ ರಸ್ತೆಗೆ ವಿವಿಧೆಡೆ ಮರಗಳು ಉರುಳಿದ್ದವು.</p>.<p>ಈಶ್ವರಮಂಗಲ ಪೊಲೀಸ್ ಹೊರ ಠಾಣೆಯ ಸಮೀಪ ಈಶ್ವರಮಂಗಲ-ಪಳ್ಳತ್ತೂರು ರಸ್ತೆಯ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿದೆ. ಅಲ್ಲಿದ್ದ ವಿದ್ಯುತ್ ಕಂಬಕ್ಕೆ ಹಾನಿಯಾಗಿದೆ.</p>.<p>ಕಾವು-ಈಶ್ವರಮಂಗಲ ರಸ್ತೆಯ ನೂಜಿಬೈಲು ಎಂಬಲ್ಲಿ, ನೆಲ್ಲಿತ್ತಡ್ಕ ಬಳಿ, ಈಶ್ವರಮಂಗಲ-ಪಳ್ಳತ್ತೂರು ರಸ್ತೆಯ ಮೇನಾಲ ಸಮೀಪ ಮರ ಉರುಳಿದೆ. ಕೆಲವೆಡೆ ಅಡಿಕೆ ಮರಗಳು ಧಾರಾಶಾಹಿಯಾಗಿದ್ದು, ಹಲವಾರು ಮಂದಿ ಕೃಷಿಕರಿಗೆ ನಷ್ಟವುಂಟಾಗಿದೆ.</p>.<p><strong>ರಸ್ತೆ ಸಂಚಾರಕ್ಕೆ ತೊಂದರೆ</strong></p>.<p><strong>ಸುಳ್ಯ</strong>: ಇಲ್ಲಿಂದ ಕೇರಳದ ಕಾಞಂಗಾಡ್ ಬಂದಡ್ಕ ಸಂಪರ್ಕದ ಅಂತರರಾಜ್ಯ ರಸ್ತೆಯಲ್ಲಿ ಕನ್ನಡಿತೋಡು ಎಂಬಲ್ಲಿ ರಸ್ತೆಗೆ ಭಾರಿ ಗಾತ್ರದ ಮತ ಬಿದ್ದು ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಎರಡೂ ಭಾಗದಲ್ಲಿ ವಾಹನಗಳ ಸರತಿ ಸಾಲು ಉಂಟಾಗಿತ್ತು. ಮರದ ತೆರವು ಕಾರ್ಯಾಚರಣೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>