ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳು ಸಕಾರಾತ್ಮಕ ಮನೋಭಾವ ರೂಢಿಸಿಕೊಳ್ಳಿ: ಪ್ರೊ.ಮ್ಯಾಥ್ಯೂ ಸಿ.ನೈನಾನ್

ಡಾನ್‌ಬಾಸ್ಕೊ ಸೀನಿಯರ್ ಸೆಕೆಂಡರಿ ತರಗತಿ ಉದ್ಘಾಟನೆ
Last Updated 22 ಜೂನ್ 2021, 6:25 IST
ಅಕ್ಷರ ಗಾತ್ರ

ಬೈಂದೂರು: ಜಗತ್ತಿನ ಹಲವು ದೇಶಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವ ಡಾನ್ ಬಾಸ್ಕೊ ಸಂಸ್ಥೆ ಗುಣಮಟ್ಟದ ಶಿಕ್ಷಣದ ಪ್ರತೀಕವಾಗಿದೆ. ಅಂತಹ ಸಂಸ್ಥೆ ತ್ರಾಸಿಯಂತಹ ಗ್ರಾಮೀಣ ಭಾಗದಲ್ಲಿ ಸಿಬಿಎಸ್‌ಸಿ ಪಠ್ಯಕ್ರಮದ ಸೀನಿಯರ್ ಸೆಕೆಂಡರಿ ಶಾಲೆ ತೆರೆದಿರುವುದು ಉತ್ತಮ ಬೆಳವಣಿಗೆ ಎಂದು ಬ್ರಹ್ಮಾವರದ ಲಿಟ್ಲ್ ರಾಕ್ ಇಂಡಿಯನ್ ಸ್ಕೂಲ್‌ನ ನಿರ್ದೇಶಕ ಪ್ರೊ.ಮ್ಯಾಥ್ಯೂ ಸಿ.ನೈನಾನ್ ಹೇಳಿದರು.

ವರ್ಚುವಲ್ ಕಾರ್ಯಕ್ರಮದಲ್ಲಿ ಸೀನಿಯರ್ ಸೆಕೆಂಡರಿ ಶಾಲೆಯ 11ನೇ ತರಗತಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಿಬಿಎಸ್‌ಇ 11ನೇ ಮತ್ತು 12ನೇ ತರಗತಿ ಶಿಕ್ಷಣವು ಅದೇ ಹಂತದ ಪಿಯುಸಿ ಶಿಕ್ಷಣಕ್ಕಿಂತ ಮೇಲಿನ ಹಂತದ್ದು. ಇದರಲ್ಲಿ ಉತ್ತೀರ್ಣರಾದವರು ಐಐಟಿ, ಐಐಎಂನಂತಹ ಪ್ರತಿಷ್ಠಿತ ಶಿಕ್ಷಣಕ್ಕೆ ಸುಲಭದಲ್ಲಿ ಪ್ರವೇಶ ಪಡೆಯುತ್ತಾರೆ, ಶಿಕ್ಷಣ ಪಡೆದ ಬಳಿಕ ಮಹತ್ವದ ಸಾಧನೆ ಮಾಡುತ್ತಾರೆ ಎನ್ನುವುದಕ್ಕೆ ಹಲವು ನಿದರ್ಶನಗಳಿವೆ ಎಂದರು.

ವಿದ್ಯಾರ್ಥಿಗಳು ಸಕಾರಾತ್ಮಕ, ಕ್ರಿಯಾಶೀಲ ಮತ್ತು ಸಂತಸದ ಮನೋಧರ್ಮವನ್ನು ರೂಢಿಸಿ
ಕೊಳ್ಳಬೇಕು. ದೇವರು, ಗುರುಗಳು, ಬಂಧುಗಳು, ಸ್ನೇಹಿತರೊಂದಿಗೆ ಸಂಬಂಧ ಬೆಳೆಸಿಕೊಳ್ಳಬೇಕು ಎಂದರು.

ಡಾನ್ ಬಾಸ್ಕೊ ಪಣಜಿ-ಕೊಂಕಣ ಪ್ರಾಂತ್ಯಾಧಿಕಾರಿ ಫಾದರ್ ಫೆಲಿಕ್ಸ್ ಫರ್ನಾಂಡಿಸ್ ಮತ್ತು ಉಪ ಪ್ರಾಂತ್ಯಾಧಿಕಾರಿ ಫಾದರ್ ಕ್ಲೈವ್ ಟೆಲಿಸ್ ಗೋವಾದ ಪ್ರಾಂತ ಕಚೇರಿಯಲ್ಲಿ ಜ್ಯೋತಿ ಬೆಳಗಿಸಿ ತರಗತಿಯನ್ನು ಉದ್ಘಾಟಿಸಿದರು. ಆ ಬಳಿಕ ಶಾಲೆಯ ರೆಕ್ಟರ್ ಫಾ. ಲಿಯೊ ಪಿರೇರಾ, ಪ್ರಾಂಶುಪಾಲ ಫಾ. ಮ್ಯಾಕ್ಸಿಂ ಡಿಸೋಜ, ಉಪ ಪ್ರಾಂಶುಪಾಲ ಫಾ. ಮರ್ವಿನ್ ಫೆನಾಂಡಿಸ್ ಶಾಲೆಯಲ್ಲಿ ಜ್ಯೋತಿ ಬೆಳಗಿದರು. ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಅವರವರ ಮನೆಗಳಲ್ಲಿ ಜ್ಯೋತಿ ಬೆಳಗಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT