ಶುಕ್ರವಾರ, ಮಾರ್ಚ್ 31, 2023
32 °C
ಹೆಲ್ಮೆಟ್‌ ಧರಿಸಿದ್ದರಿಂದ ಅನಾಹುತ ತಪ್ಪಿತು: ಬೋಳಾರ್‌

ನಟ ಅರವಿಂದ ಬೋಳಾರ್‌ಗೆ ಕಾಲಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ತುಳು ಸಿನಿಮಾ ನಟ ಹಾಗೂ ರಂಗಭೂಮಿ ಕಲಾವಿದ ಅರವಿಂದ ಬೋಳಾರ್‌ ಅವರು ಸ್ಕೂಟರ್‌ನಿಂದ ಬಿದ್ದು, ಅವರ ಬಲಗಾಲಿಗೆ ಸಣ್ಣ ಪ್ರಮಾಣದ ಗಾಯವಾಗಿದೆ.

ಈ ಕುರಿತು ವಿಡಿಯೊ ಸಂದೇಶ ಹಂಚಿಕೊಂಡಿರುವ ಅರವಿಂದ ಬೋಳಾರ್, ‘ನಾನು ದ್ವಿಚಕ್ರ ವಾಹನ ಚಲಾಯಿಸುವಾಗ ಬಿದ್ದಿದ್ದೇನೆ. ಕಾಲಿಗೆ ಸ್ವಲ್ಪ ಏಟಾಗಿದೆ. ನೀವೆಲ್ಲ ನನ್ನನ್ನು ಅಷ್ಟು ಪ್ರೀತಿ ಮಾಡುತ್ತಿದ್ದೀರಿ. ನಿಮ್ಮೆಲ್ಲರ ಆಶೀರ್ವಾದದಿಂದ ನನಗೇ ಏನೂ ಆಗಿಲ್ಲ’ ಎಂದು ತಿಳಿಸಿದ್ದಾರೆ.

‘ನಾನು ವಾಹನ ಚಲಾಯಿಸುವಾಗ ಹೆಲ್ಮೆಟ್‌ ಧರಿಸಿದ್ದೆ. ಆದ್ದರಿಂದಲೇ ದೊಡ್ಡಮಟ್ಟದ ಅನಾಹುತವಾಗುವುದು ತಪ್ಪಿದೆ’ ಎಂದೂ ಅವರು ತಿಳಿಸಿದ್ದಾರೆ.

‘ಬೋಳಾರ್‌ ಅವರು ಕೊಡಿಯಾಲ್‌ಬೈಲ್‌ನ ಯೆನೆಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಅವರಿಗೆ ಮಂಗಳವಾರ ಸಣ್ಣಪ್ರಮಾಣದ ಶಸ್ತ್ರಚಿಕಿತ್ಸೆ ನಡೆಯಲಿದೆ’ ಎಂದು ನಗರ ಪೊಲೀಸ್‌ ಕಮಿಷನರ್‌ ಎನ್‌.ಶಶಿಕುಮಾರ್‌ ತಿಳಿಸಿದರು.

ಸಂಚಾರ ವಿಭಾಗದ ಎಸಿಪಿ ಗೀತಾ ಕುಲಕರ್ಣಿಯವರು ಅರವಿಂದ್‌ ಬೊಳಾರ್ ಅವರನ್ನು ಸೋಮವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು