ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಳು ಸಿನಿಮಾ ನಟ ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣ: ಇಬ್ಬರ ಬಂಧನ

Last Updated 4 ನವೆಂಬರ್ 2020, 14:47 IST
ಅಕ್ಷರ ಗಾತ್ರ

ಮಂಗಳೂರು: ರೌಡಿಶೀಟರ್, ಚಿತ್ರನಟ ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ಸತೀಶ ಕುಲಾಲ್ ಹಾಗೂ ಕಿನ್ನಿಗೋಳಿಯ ಗಿರೀಶ್ ಬಂಧಿತ ಆರೋಪಿಗಳು. ಇಬ್ಬರೂ ಕೇರಳದಿಂದ ಬಂಟ್ವಾಳಕ್ಕೆ ಬರುತ್ತಿರುವ ಮಾಹಿತಿ ಪಡೆದ ಪೊಲೀಸರು, ಇಬ್ಬರನ್ನು ಮುಡಿಪು ಬಳಿ ಬಂಧಿಸಿದ್ದಾರೆ.

ಮೂರು ದಿನಗಳ ಹಿಂದೆ ಬಂಟ್ವಾಳದ ಅಪಾರ್ಟಮೆಂಟ್‌ನಲ್ಲಿ ಸುರೇಂದ್ರ ಬಂಟ್ವಾಳ ಕೊಲೆಯಾಗಿತ್ತು. ನಂತರ ಸುರೇಂದ್ರ ಬಂಟ್ವಾಳನ ಆಪ್ತ ಎನ್ನಲಾದ ಸತೀಶ್ ಎಂಬಾತ ಅಡಿಯೊ ಕಳುಹಿಸಿದ್ದು, ಸುರೇಂದ್ರ ಬಂಟ್ವಾಳ ಕೊಲೆ ಮಾಡಿರುವುದು ನಾನೇ. ಇದು ಉಡುಪಿಯ ಕಿಶನ್ ಹೆಗ್ಡೆ ಕೊಲೆಗೆ ಪ್ರತೀಕಾರ ಎಂದು ತಿಳಿಸಿದ್ದ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT