ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಳು ನಟ ಸುರೇಂದ್ರ ಬಂಟ್ವಾಳ ಕೊಲೆ

Last Updated 22 ಅಕ್ಟೋಬರ್ 2020, 1:28 IST
ಅಕ್ಷರ ಗಾತ್ರ

ಮಂಗಳೂರು: ಬಂಟ್ವಾಳದ ಭಂಡಾರಿಬೆಟ್ಟು ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ಹಿಂದೂ ಸಂಘಟನೆ ಮಾಜಿ ಸದಸ್ಯ, ತುಳು ಚಿತ್ರನಟ ಸುರೇಂದ್ರ ಬಂಟ್ವಾಳ (39) ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ನಾಲ್ಕು ವರ್ಷಗಳಿಂದ ಈ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ಸುರೇಂದ್ರ ಬಂಟ್ವಾಳ ಮಂಗಳವಾರದಿಂದ ಮೊಬೈ
ಲ್‌ ಕರೆ ಸ್ವೀಕರಿಸುತ್ತಿರಲಿಲ್ಲ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದು ಪರಿಶೀಲಿಸಿದಾಗ ಸುರೇಂದ್ರ ಕೊಲೆಯಾಗಿರುವುದು ಪತ್ತೆಯಾಗಿದೆ. ಮಂಗಳವಾರ ರಾತ್ರಿ ಕೊಲೆಯಾಗಿರಬಹುದು ಎಂದು ಶಂಕಿಸಲಾಗಿದೆ.

ಈ ಹಿಂದೆ ಬಜರಂಗದಳದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಸುರೇಂದ್ರ ಬಂಟ್ವಾಳ ನಂತರ ಸಂಘಟನೆ ತೊರೆದಿದ್ದರು. ಎರಡು ವರ್ಷದ ಹಿಂದೆ ಬಜರಂಗದಳದ ಭುವಿತ್‌ ಶೆಟ್ಟಿ ನಡೆಸಿದ ಹಲ್ಲೆಗೆ ಪ್ರತೀಕಾರವಾಗಿ, ಸುರೇಂದ್ರ ಬಂಟ್ವಾಳ ತಂಡ ಬಡ್ಡಕಟ್ಟೆಯಲ್ಲಿ ಬಜರಂಗದಳ ಕಾರ್ಯಕರ್ತರ ಮೇಲೆ ತಲವಾರಿನಿಂದ ಹಲ್ಲೆಗೆ ಯತ್ನಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT