<p><strong>ಮಂಗಳೂರು:</strong> ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಪ್ರಸ್ತಾಪಕ್ಕೆ ಸಂಬಂಧ, ಆಂಧ್ರಪ್ರದೇಶದಲ್ಲಿ ಹೆಚ್ಚುವರಿ ಅಧಿಕೃತ ಭಾಷೆ ಘೋಷಣೆ ವೇಳೆ ಅನುಸರಿಸಿರುವ ಮಾನದಂಡಗಳ ಅಧ್ಯಯನ ನಡೆಸಿರುವ ತಂಡವು ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ.</p>.<p>ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಅಂದಿನ ನಿರ್ದೇಶಕಿ ಕೆ.ಎಮ್ ಗಾಯತ್ರಿ ನೇತೃತ್ವದ ತಂಡವು 2026ರ ಜ.19 ಹಾಗೂ 20ರಂದು ಆಂಧ್ರಪ್ರದೇಶದ ಸಚಿವಾಲಯ, ವಿವಿಧ ಇಲಾಖೆ, ಕಚೇರಿಗಳಿಗೆ ಭೇಟಿ ನೀಡಿತ್ತು. ಆಂದ್ರಪ್ರದೇಶದಲ್ಲಿ ಉರ್ದು ಭಾಷೆಯನ್ನು ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಘಿಸಲು ಅನುಸರಿಸಿದ ಮಾನದಂಡಗಳು ಹಾಗೂ ಅದರ ವಿಧಿವಿಧಾನಗಳ ಬಗ್ಗೆ ಅಧ್ಯಯನ ನಡೆಸಿದ್ದ ತಂಡವು ವರದಿಯನ್ನು ಸಿದ್ಧಪಡಿಸಿದೆ. ಬೆಂಗಳೂರಿನಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಕಾರ್ಯದರ್ಶಿ ಜೆ.ಮಂಜುನಾಥ್ ಅವರಿಗೆ ಅಧ್ಯಯನ ತಂಡದ ಸದಸ್ಯರು ವರದಿಯನ್ನು ಸಲ್ಲಿಸಿದರು. ತುಳುಭಾಷೆಯ ಹಿನ್ನೆಲೆ ಹಾಗೂ ಚರಿತ್ರೆಯ ಕುರಿತ ಪ್ರಸ್ತಾವವನ್ನು ಕೂಡ ವರದಿ ಜೊತೆಗೆ ಸಲ್ಲಿಸಲಾಯಿತು. </p>.<p>ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ನಿರ್ದೇಶಕ ಡಾ. ಬಿ.ಎಸ್. ಮಂಜುನಾಥ ಸ್ವಾಮಿ, ಅಧ್ಯಯನ ತಂಡದಲ್ಲಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್, ಯಕ್ಷಗಾನ ಅಕಾಡೆಮಿಯ ಸದಸ್ಯ ಸುಧಾಕರ ಶೆಟ್ಟಿ, ಕಾನೂನು ಇಲಾಖೆಯ ಉಪಕಾರ್ಯದರ್ಶಿ ವನಿತಾ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಉಪಕಾರ್ಯದರ್ಶಿ ಮೂರ್ತಿ ಕೆ.ಎನ್, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಅಧೀನ ಕಾರ್ಯದರ್ಶಿ ಕೆ.ಎಂ.ಶುಭಶ್ರೀ, ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಕರಿಯಪ್ಪ ಎನ್. ಜೊತೆಯಲ್ಲಿದ್ದರು ಎಂದು ಪ್ರಕಟಣೆ ತಿಳಿಸಿದೆ.</p>.<p>‘ರಾಜ್ಯ ಸರ್ಕಾರ ಒಂದು ಭಾಷೆಯನ್ನು ಅಧಿಕೃತ ಭಾಷೆ ಎಂದು ಘೋಷಿಸಲು ಸಂವಿಧಾನದ ಅನುಚ್ಚೇದ 345ರಲ್ಲಿ ಅವಕಾಶ ಇದೆ. ಈ ಬಗ್ಗೆ ಕ್ರಮವಹಿಸುವ ಮೊದಲು ಕಾನೂನಾತ್ಮಕವಾಗಿ ಸಮಿತಿ ರಚಿಸಿ, ವರದಿ ಪಡೆಯಬಹುದು. ಎರಡನೇ ಅಧಿಕೃತ ಭಾಷೆಯನ್ನು ಹೊಂದಿರುವ ರಾಜ್ಯಗಳಲ್ಲಿ ಅಧ್ಯಯನ ನಡೆಸಿ ಕ್ರಮ ವಹಿಸಬಹುದು‘ ಎಂದು ಕಾನೂನು ಇಲಾಖೆ ಸಲಹೆ ನೀಡಿತ್ತು. ಅದರ ಆಧಾರದಲ್ಲಿ ಸರ್ಕಾರ ಕೆ.ಎಮ್ ಗಾಯತ್ರಿ ನೇತೃತ್ವದ ಅಧ್ಯಯನ ತಂಡವನ್ನು 2025ರ ಜುಲೈ 30ರಂದು ರಚಿಸಿತ್ತು. </p>.<p>1966ರ ಆಂಧ್ರಪ್ರದೇಶ ಅಧಿಕೃತ ಭಾಷಾ ಕಾಯ್ದೆಯ ಸೆಕ್ಷನ್ 2 ಪ್ರಕಾರ ಆಂಧ್ರಪ್ರದೇಶದಲ್ಲಿ ತೆಲುಗು ಮಾತ್ರ ಅಧಿಕೃತ ಭಾಷೆಯಾಗಿತ್ತು. ಆ ಕಾಯ್ದೆಯ ಸೆಕ್ಷನ್ 7ರ ಪ್ರಕಾರ ಬೇರಾವುದೇ ಭಾಷೆಯನ್ನು ಹೆಚ್ಚುವರಿಯಾಗಿ ಅಧಿಕೃತ ಭಾಷೆಯನ್ನಾಗಿ ಸೇರಿಸಲು ಅವಕಾಶವಿತ್ತು. ಅದನ್ನು ಬಳಸಿಕೊಂಡು 2002ರಲ್ಲಿ ಆಂಧ್ರ ಪ್ರದೇಶದ ಆಗಿನ ಮುಖ್ಯಮಂತ್ರು ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರ ಉರ್ದು ಭಾಷೆಯನ್ನು ಮಾತನಾಡುವ ಅಲ್ಪಸಂಖ್ಯಾತರ ಅನುಕೂಲಕ್ಕಾಗಿ 1966ರ ಆಂಧ್ರಪ್ರದೇಶ ಅಧಿಕೃತ ಭಾಷಾ ಕಾಯ್ದೆಯ ಸೆಕ್ಷನ್ 2ಕ್ಕೆ ತಿದ್ದುಪಡಿ ತಂದಿತ್ತು. ಉರ್ದು ಮಾತನಾಡುವವರ ಸಂಖ್ಯೆ ಶೇ 10ಕ್ಕಿಂತಲೂ ಜಾಸ್ತಿ ಇದ್ದ ಅಲ್ಲಿನ ಎಂಟು ಜಿಲ್ಲೆಗಳಿಗೆ (ಹೈದರಾಬಾದ್, ಕರ್ನೂಲ್,ಕಡಪ, ನಿಜಾಮಾಬಾದ್, ಅನಂತಪುರ, ರಂಗಾರೆಡ್ಡಿ, ಮೇದಕ್, ಗುಂಟೂರು) ಸೀಮಿತವಾಗಿ ಹಾಗೂ ನಿರ್ದಿಷ್ಟ ಅವಧಿಗೆ ಉರ್ದುವನ್ನು ಅಧಿಕೃತ ಭಾಷೆಯನ್ನಾಗಿ ಘೋಷಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಪ್ರಸ್ತಾಪಕ್ಕೆ ಸಂಬಂಧ, ಆಂಧ್ರಪ್ರದೇಶದಲ್ಲಿ ಹೆಚ್ಚುವರಿ ಅಧಿಕೃತ ಭಾಷೆ ಘೋಷಣೆ ವೇಳೆ ಅನುಸರಿಸಿರುವ ಮಾನದಂಡಗಳ ಅಧ್ಯಯನ ನಡೆಸಿರುವ ತಂಡವು ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ.</p>.<p>ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಅಂದಿನ ನಿರ್ದೇಶಕಿ ಕೆ.ಎಮ್ ಗಾಯತ್ರಿ ನೇತೃತ್ವದ ತಂಡವು 2026ರ ಜ.19 ಹಾಗೂ 20ರಂದು ಆಂಧ್ರಪ್ರದೇಶದ ಸಚಿವಾಲಯ, ವಿವಿಧ ಇಲಾಖೆ, ಕಚೇರಿಗಳಿಗೆ ಭೇಟಿ ನೀಡಿತ್ತು. ಆಂದ್ರಪ್ರದೇಶದಲ್ಲಿ ಉರ್ದು ಭಾಷೆಯನ್ನು ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಘಿಸಲು ಅನುಸರಿಸಿದ ಮಾನದಂಡಗಳು ಹಾಗೂ ಅದರ ವಿಧಿವಿಧಾನಗಳ ಬಗ್ಗೆ ಅಧ್ಯಯನ ನಡೆಸಿದ್ದ ತಂಡವು ವರದಿಯನ್ನು ಸಿದ್ಧಪಡಿಸಿದೆ. ಬೆಂಗಳೂರಿನಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಕಾರ್ಯದರ್ಶಿ ಜೆ.ಮಂಜುನಾಥ್ ಅವರಿಗೆ ಅಧ್ಯಯನ ತಂಡದ ಸದಸ್ಯರು ವರದಿಯನ್ನು ಸಲ್ಲಿಸಿದರು. ತುಳುಭಾಷೆಯ ಹಿನ್ನೆಲೆ ಹಾಗೂ ಚರಿತ್ರೆಯ ಕುರಿತ ಪ್ರಸ್ತಾವವನ್ನು ಕೂಡ ವರದಿ ಜೊತೆಗೆ ಸಲ್ಲಿಸಲಾಯಿತು. </p>.<p>ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ನಿರ್ದೇಶಕ ಡಾ. ಬಿ.ಎಸ್. ಮಂಜುನಾಥ ಸ್ವಾಮಿ, ಅಧ್ಯಯನ ತಂಡದಲ್ಲಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್, ಯಕ್ಷಗಾನ ಅಕಾಡೆಮಿಯ ಸದಸ್ಯ ಸುಧಾಕರ ಶೆಟ್ಟಿ, ಕಾನೂನು ಇಲಾಖೆಯ ಉಪಕಾರ್ಯದರ್ಶಿ ವನಿತಾ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಉಪಕಾರ್ಯದರ್ಶಿ ಮೂರ್ತಿ ಕೆ.ಎನ್, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಅಧೀನ ಕಾರ್ಯದರ್ಶಿ ಕೆ.ಎಂ.ಶುಭಶ್ರೀ, ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಕರಿಯಪ್ಪ ಎನ್. ಜೊತೆಯಲ್ಲಿದ್ದರು ಎಂದು ಪ್ರಕಟಣೆ ತಿಳಿಸಿದೆ.</p>.<p>‘ರಾಜ್ಯ ಸರ್ಕಾರ ಒಂದು ಭಾಷೆಯನ್ನು ಅಧಿಕೃತ ಭಾಷೆ ಎಂದು ಘೋಷಿಸಲು ಸಂವಿಧಾನದ ಅನುಚ್ಚೇದ 345ರಲ್ಲಿ ಅವಕಾಶ ಇದೆ. ಈ ಬಗ್ಗೆ ಕ್ರಮವಹಿಸುವ ಮೊದಲು ಕಾನೂನಾತ್ಮಕವಾಗಿ ಸಮಿತಿ ರಚಿಸಿ, ವರದಿ ಪಡೆಯಬಹುದು. ಎರಡನೇ ಅಧಿಕೃತ ಭಾಷೆಯನ್ನು ಹೊಂದಿರುವ ರಾಜ್ಯಗಳಲ್ಲಿ ಅಧ್ಯಯನ ನಡೆಸಿ ಕ್ರಮ ವಹಿಸಬಹುದು‘ ಎಂದು ಕಾನೂನು ಇಲಾಖೆ ಸಲಹೆ ನೀಡಿತ್ತು. ಅದರ ಆಧಾರದಲ್ಲಿ ಸರ್ಕಾರ ಕೆ.ಎಮ್ ಗಾಯತ್ರಿ ನೇತೃತ್ವದ ಅಧ್ಯಯನ ತಂಡವನ್ನು 2025ರ ಜುಲೈ 30ರಂದು ರಚಿಸಿತ್ತು. </p>.<p>1966ರ ಆಂಧ್ರಪ್ರದೇಶ ಅಧಿಕೃತ ಭಾಷಾ ಕಾಯ್ದೆಯ ಸೆಕ್ಷನ್ 2 ಪ್ರಕಾರ ಆಂಧ್ರಪ್ರದೇಶದಲ್ಲಿ ತೆಲುಗು ಮಾತ್ರ ಅಧಿಕೃತ ಭಾಷೆಯಾಗಿತ್ತು. ಆ ಕಾಯ್ದೆಯ ಸೆಕ್ಷನ್ 7ರ ಪ್ರಕಾರ ಬೇರಾವುದೇ ಭಾಷೆಯನ್ನು ಹೆಚ್ಚುವರಿಯಾಗಿ ಅಧಿಕೃತ ಭಾಷೆಯನ್ನಾಗಿ ಸೇರಿಸಲು ಅವಕಾಶವಿತ್ತು. ಅದನ್ನು ಬಳಸಿಕೊಂಡು 2002ರಲ್ಲಿ ಆಂಧ್ರ ಪ್ರದೇಶದ ಆಗಿನ ಮುಖ್ಯಮಂತ್ರು ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರ ಉರ್ದು ಭಾಷೆಯನ್ನು ಮಾತನಾಡುವ ಅಲ್ಪಸಂಖ್ಯಾತರ ಅನುಕೂಲಕ್ಕಾಗಿ 1966ರ ಆಂಧ್ರಪ್ರದೇಶ ಅಧಿಕೃತ ಭಾಷಾ ಕಾಯ್ದೆಯ ಸೆಕ್ಷನ್ 2ಕ್ಕೆ ತಿದ್ದುಪಡಿ ತಂದಿತ್ತು. ಉರ್ದು ಮಾತನಾಡುವವರ ಸಂಖ್ಯೆ ಶೇ 10ಕ್ಕಿಂತಲೂ ಜಾಸ್ತಿ ಇದ್ದ ಅಲ್ಲಿನ ಎಂಟು ಜಿಲ್ಲೆಗಳಿಗೆ (ಹೈದರಾಬಾದ್, ಕರ್ನೂಲ್,ಕಡಪ, ನಿಜಾಮಾಬಾದ್, ಅನಂತಪುರ, ರಂಗಾರೆಡ್ಡಿ, ಮೇದಕ್, ಗುಂಟೂರು) ಸೀಮಿತವಾಗಿ ಹಾಗೂ ನಿರ್ದಿಷ್ಟ ಅವಧಿಗೆ ಉರ್ದುವನ್ನು ಅಧಿಕೃತ ಭಾಷೆಯನ್ನಾಗಿ ಘೋಷಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>