ಕುಲಪತಿ ಡಾ.ಸತೀಶ್ ಕುಮಾರ್ ಭಂಡಾರಿ ಅಧ್ಯಕ್ಷತೆ ವಹಿಸುವರು. ಮಣಿಪಾಲದ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಾಫಿಕಲ್ ಆರ್ಟ್ಸ್ ನಿರ್ದೇಶಕ ವರದೇಶ ಹಿರೇಗಂಗೆ ಗಾಂಧಿ ಸ್ಮರಣೆ ಮಾಡುವರು. ಸಹ ಕುಲಾಧಿಪತಿ ಡಾ.ಎಂ.ಶಾಂತಾರಾಮ ಶೆಟ್ಟಿ, ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ, ವಿಶ್ರಾಂತ ಕುಲಪತಿ ಡಾ.ಎಸ್. ರಮಾನಂದ ಶೆಟ್ಟಿ, ಅಲ್ ಅಮೆರಿಕಾ ತುಳು ಅಸೋಸಿಯೇಶನ್ ಅಧ್ಯಕ್ಷ ಭಾಸ್ಕರ ಶೇರಿಗಾರ್ ಮಾಳ ಪಾಲ್ಗೊಳ್ಳುವರು.