ಮಂಗಳೂರ: ಬಂಟ್ವಾಳದ ಬಸ್ತಿಪಡ್ಪುವಿನಲ್ಲಿರುವ ವಸ್ತಿ ಕಟ್ಟದಲ್ಲಿ ಹಾಡುಹಾಗಲೇ ತುಳು ಸಿನಿಮಾದ ನಟ,ರೌಡಿಶೀಟರ್ ಸುರೇಂದ್ರ ಬಂಟ್ವಾಳ್ನ ಹತ್ಯೆ ಮಾಡಲಾಗಿದೆ.
ಬಂಟ್ವಾಳ ನಗರ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ.
2018 ರಲ್ಲಿ ಬಡ್ಡಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಕತ್ತಿಯಿಂದ ಹಲ್ಲೆ ಮಾಡಿದ ಆರೋಪದ ಮೇಲೆ ಸುರೇಂದ್ರ ಸುದ್ದಿಯಲ್ಲಿದ್ದರು. ಈ ಹಿಂದೆ ಬಲಪಂಥೀಯ ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದ ಸುರೇಂದ್ರ, ಬಳಿಕ ಕಾಂಗ್ರೆಸ್ ಸೇರಿದ್ದರು. ಅವರು ಚಾಲಿಪೋಲಿಲು ತುಳು ಸಿನಿಮಾದಲ್ಲಿ ನಟಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.