<p>ಮಂಗಳೂರು: ತುಳು ಲಿಪಿಯನ್ನು ಸೂಕ್ತವಾಗಿ ಯುನಿಕೋಡ್ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಅಕಾಡೆಮಿಗೆ ಸೂಚನೆ ನೀಡಿದ್ದು, ಈ ಮೂಲಕ ಅಂತರ ರಾಷ್ಟ್ರೀಯ ಮಟ್ಟದಲ್ಲಿ ತುಳು ಭಾಷೆಗೆ ಮಾನ್ಯತೆ ಪಡೆಯುವಲ್ಲಿ ದಿಟ್ಟ ಹೆಜ್ಜೆ ಇಟ್ಟಂತಾಗಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ಹೇಳಿದರು.</p>.<p>ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕ್ರಿಯೆಗೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.</p>.<p>ತುಳು ಲಿಪಿಯನ್ನು ಯುನಿಕೋಡ್ಗೆ ಸೇರ್ಪಡೆ ಕಾರ್ಯವನ್ನು ಅಕಾಡೆಮಿಯ ಹಿಂದಿನ ಅಧ್ಯಕ್ಷೆ ಜಾನಕಿ ಬ್ರಹ್ಮಾವರ ಅವರ ಅವಧಿಯಲ್ಲಿ ತಂತ್ರಜ್ಞಾನ ತಜ್ಞ ಪವನಜ ಮೂಲಕ ಆರಂಭಿಸಲಾಗಿತ್ತು. ಮಾಜಿ ಅಧ್ಯಕ್ಷ ಎ.ಸಿ. ಭಂಡಾರಿ ಕೂಡ ಪ್ರಯತ್ನ ನಡೆಸಿದ್ದರು. ಈ ಅವಧಿಯಲ್ಲಿ ವೇಗ ನೀಡಲಾಯಿತು. ಹಲವು ಸಂಘ ಸಂಸ್ಥೆಗಳು, ಹಲವು ವಿಶ್ವವಿದ್ಯಾಲಯಗಳ ಪಠ್ಯಗಳ ಮೂಲಕ, 2ಸಾವಿರ ವರ್ಷಗಳ ಇತಿಹಾಸವಿರುವ ತುಳುವಿನ ಮೌಲ್ಯ, ಅಗಾಧತೆಯನ್ನು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಡಲಾಗಿದೆ ಎಂದು ವಿವರಿಸಿದರು.</p>.<p>ತುಳು ಕಲಿಸುವವರ ನಡುವಿನ ಗೊಂದಲವನ್ನು ಅಕಾಡೆಮಿ ವತಿಯಿಂದ ಬಗೆಹರಿಸಲಾಗಿದೆ. ಶಾಲೆಗಳಲ್ಲಿ ಸದ್ಯ<br />ತೃತೀಯ ಐಚ್ಛಿಕ ಭಾಷೆಯಾಗಿ ತುಳುವನ್ನು ಕಲಿಸಲಾಗುತ್ತಿದೆ. ಜಿಲ್ಲೆಯಲ್ಲಿ 250 ಶಾಲೆಗಳಿದ್ದು, ಕೇವಲ 53 ಶಾಲೆಗಳಲ್ಲಿ ಮಾತ್ರವೇ ಅನುಷ್ಠಾನವಾಗಿದೆ. ಎಲ್ಲ ಶಾಲೆಗಳಲ್ಲಿ 1 ನೇ ತರಗತಿಯಿಂದಲೇ ತುಳು ಕಲಿಕೆ ಆರಂಭವಾಗಬೇಕು. ತುಳುವರು ತಮ್ಮ ಮಾತೃ ಭಾಷೆಯಾಗಿ ತುಳುವನ್ನೇ ಅಧಿಕೃತವಾಗಿ ಶಾಲಾ ಹಂತದಲ್ಲೇ ನೋಂದಣಿ ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಸದಸ್ಯ ಡಾ. ಆಕಾಶ್ ರಾಜ್ ಜೈನ್ ಸದಸ್ಯರಾದ ಶಶಿಧರ ಶೆಟ್ಟಿ, ನಾಗೇಶ್ ಕುಲಾಲ್, ರಿಜಿಸ್ಟ್ರಾರ್ ಕವಿತಾ ಪ್ರಶಾಂತ್ ಸುದ್ದಿಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಗಳೂರು: ತುಳು ಲಿಪಿಯನ್ನು ಸೂಕ್ತವಾಗಿ ಯುನಿಕೋಡ್ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಅಕಾಡೆಮಿಗೆ ಸೂಚನೆ ನೀಡಿದ್ದು, ಈ ಮೂಲಕ ಅಂತರ ರಾಷ್ಟ್ರೀಯ ಮಟ್ಟದಲ್ಲಿ ತುಳು ಭಾಷೆಗೆ ಮಾನ್ಯತೆ ಪಡೆಯುವಲ್ಲಿ ದಿಟ್ಟ ಹೆಜ್ಜೆ ಇಟ್ಟಂತಾಗಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ಹೇಳಿದರು.</p>.<p>ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕ್ರಿಯೆಗೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.</p>.<p>ತುಳು ಲಿಪಿಯನ್ನು ಯುನಿಕೋಡ್ಗೆ ಸೇರ್ಪಡೆ ಕಾರ್ಯವನ್ನು ಅಕಾಡೆಮಿಯ ಹಿಂದಿನ ಅಧ್ಯಕ್ಷೆ ಜಾನಕಿ ಬ್ರಹ್ಮಾವರ ಅವರ ಅವಧಿಯಲ್ಲಿ ತಂತ್ರಜ್ಞಾನ ತಜ್ಞ ಪವನಜ ಮೂಲಕ ಆರಂಭಿಸಲಾಗಿತ್ತು. ಮಾಜಿ ಅಧ್ಯಕ್ಷ ಎ.ಸಿ. ಭಂಡಾರಿ ಕೂಡ ಪ್ರಯತ್ನ ನಡೆಸಿದ್ದರು. ಈ ಅವಧಿಯಲ್ಲಿ ವೇಗ ನೀಡಲಾಯಿತು. ಹಲವು ಸಂಘ ಸಂಸ್ಥೆಗಳು, ಹಲವು ವಿಶ್ವವಿದ್ಯಾಲಯಗಳ ಪಠ್ಯಗಳ ಮೂಲಕ, 2ಸಾವಿರ ವರ್ಷಗಳ ಇತಿಹಾಸವಿರುವ ತುಳುವಿನ ಮೌಲ್ಯ, ಅಗಾಧತೆಯನ್ನು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಡಲಾಗಿದೆ ಎಂದು ವಿವರಿಸಿದರು.</p>.<p>ತುಳು ಕಲಿಸುವವರ ನಡುವಿನ ಗೊಂದಲವನ್ನು ಅಕಾಡೆಮಿ ವತಿಯಿಂದ ಬಗೆಹರಿಸಲಾಗಿದೆ. ಶಾಲೆಗಳಲ್ಲಿ ಸದ್ಯ<br />ತೃತೀಯ ಐಚ್ಛಿಕ ಭಾಷೆಯಾಗಿ ತುಳುವನ್ನು ಕಲಿಸಲಾಗುತ್ತಿದೆ. ಜಿಲ್ಲೆಯಲ್ಲಿ 250 ಶಾಲೆಗಳಿದ್ದು, ಕೇವಲ 53 ಶಾಲೆಗಳಲ್ಲಿ ಮಾತ್ರವೇ ಅನುಷ್ಠಾನವಾಗಿದೆ. ಎಲ್ಲ ಶಾಲೆಗಳಲ್ಲಿ 1 ನೇ ತರಗತಿಯಿಂದಲೇ ತುಳು ಕಲಿಕೆ ಆರಂಭವಾಗಬೇಕು. ತುಳುವರು ತಮ್ಮ ಮಾತೃ ಭಾಷೆಯಾಗಿ ತುಳುವನ್ನೇ ಅಧಿಕೃತವಾಗಿ ಶಾಲಾ ಹಂತದಲ್ಲೇ ನೋಂದಣಿ ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಸದಸ್ಯ ಡಾ. ಆಕಾಶ್ ರಾಜ್ ಜೈನ್ ಸದಸ್ಯರಾದ ಶಶಿಧರ ಶೆಟ್ಟಿ, ನಾಗೇಶ್ ಕುಲಾಲ್, ರಿಜಿಸ್ಟ್ರಾರ್ ಕವಿತಾ ಪ್ರಶಾಂತ್ ಸುದ್ದಿಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>