ವಿಶೇಷ ಉಪನ್ಯಾಸ ನೀಡಿದ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು, ‘ಕನ್ನಡ ಮಾಧ್ಯಮಕ್ಕೆ ತುಳುವರ ಕೊಡುಗೆ ಅಪಾರ. ಭಾಷಾ ಶುದ್ಧತೆ, ತುಡಿತ, ಪ್ರಾಮಾಣಿಕತೆ, ಶ್ರಮ, ತಾಳ್ಮೆ, ಕಷ್ಟವನ್ನು ಎದುರಿಸಿ ಗೆದ್ದು ಬರುವ ಗುಣವನ್ನು ನಮ್ಮ ಮಣ್ಣು ಕಲಿಸಿದೆ. ಆದರೆ, ಈಗ ಮಾಧ್ಯಮದಲ್ಲಿ ರಾಜಕೀಯ ಪ್ರವೇಶದಿಂದ ತುಳು ಪ್ರತಿಭೆಗಳು ಅವಕಾಶ ಕಳೆದುಕೊಳ್ಳುತ್ತಿರುವುದು ಬೇಸರದ ವಿಚಾರ’ ಎಂದರು.