ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಳು ಲಿಪಿ ಕಾರ್ಯಾಗಾರ: ಸನ್ಮಾನ

Last Updated 5 ಜನವರಿ 2021, 7:56 IST
ಅಕ್ಷರ ಗಾತ್ರ

ಮಂಗಳೂರು: ತುಳುಲಿಪಿ ಕಾರ್ಯಾಗಾರದಲ್ಲಿ ಉತ್ತಮ ಅಂಕ ಪಡೆದವರನ್ನು ಸನ್ಮಾನಿಸುವ ಕಾರ್ಯಕ್ರಮವು ಈಚೆಗೆ ಮಲ್ಪೆಯ ನಾರಾಯಣಗುರು ಸಮುದಾಯ ಭವನದಲ್ಲಿ ನಡೆಯಿತು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಳುನಾಡ್ ಹಾಗೂ ಬಿಲ್ಲವ ಸಮಾಜ ಸೇವಾ ಸಂಘದ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.

ತುಳುಲಿಪಿ ಶಿಕ್ಷಕರಾದ ಉಷಾ ಎನ್‌. ಪೂಜಾರಿ, ರಾಜೇಶ್ ತುಳುವೆ, ಉಜ್ವಲ ಎನ್. ಪೂಜಾರಿ, ದೀಪಶ್ರೀ ಪೂಜಾರಿ, ವಿಜಯ್‌ ವಿಕ್ಕಿ ಅಮೀನ್ ಕಾರ್ಯಕ್ರಮ ನಡೆಸಿಕೊಟ್ಟರು.

ಅಕಾಡೆಮಿ ಸದಸ್ಯ ಆಕಾಶ್‌ ರಾಜ್‌ ಜೈನ್ ಮಾತನಾಡಿ, ‘ತುಳುವನ್ನು ಸಂವಿಧಾನದ ಎಂಟನೇ ಪರಿಚ್ಛೇಧಕ್ಕೆ ಸೇರ್ಪಡೆ ಮಾಡುವುದು ಹಾಗೂ ತುಳು ಲಿಪಿ ಯುನಿಕೋಡ್‌ಗಾಗಿ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿವೆ’ ಎಂದರು.

ತುಳುಲಿಪಿ ಸಂಶೋಧಕ ಪುಂಡೂರು ವೆಂಕಟರಾಜ ಪುಣಿಚಿತ್ತಾಯ ಅವರ ಬಗ್ಗೆ ಮಾಹಿತಿ ನೀಡಲಾಯಿತು.

ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೃಷ್ಣಪ್ಪ ಜತ್ತನ್‌ ಅಧ್ಯಕ್ಷತೆ ವಹಿಸಿದ್ದರು. ಜೈ ತುಳುನಾಡ್ ಅಧ್ಯಕ್ಷ ಸುದರ್ಶನ್ ಸುರತ್ಕಲ್, ಪ್ರಧಾನ ಕಾರ್ಯದರ್ಶಿ ಸದಾಶಿವ ಮುದ್ರಾಡಿ, ಮಲ್ಪೆ ಬಿಲ್ಲವ ಸಂಘದ ಸುನೀಲ್ ದಾಸ್, ಸತೀಶ್‌ ಕೊಡವೂರು ನಾರಾಯಣಗುರು ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಘುರಾಮ ಸುವರ್ಣ, ಬಿಲ್ಲವ ಮಹಿಳಾ ಘಟಕದ ಅಧ್ಯಕ್ಷೆ ಆಶಾ ಜಗದೀಶ್ ಬಂಗೇರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT