ಇದರ ಹಿಂದೆ ಯಾವುದೇ ರಾಜಕೀಯ ಇಲ್ಲ. ಎಲ್ಲ ತುಳುಪರ ಸಂಘಟನೆಗಳು ರಾಜಕೀಯ ಪಕ್ಷಗಳು, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಸಂಸ್ಥೆಗಳು ಅಭಿಯಾನದಲ್ಲಿ ಕೈಜೋಡಿಸಬೇಕು ಎಂದು ತುಳುವೆರ್ ಕುಡ್ಲದ ಅಧ್ಯಕ್ಷ ಪ್ರತೀಕ್ ಪೂಜಾರಿ ಹೇಳಿದರು. ಮಹಿಳಾ ವಿಭಾಗದ ಅಧ್ಯಕ್ಷೆ ಪೂಜಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯರಾಂ, ತುಳುನಾಡ ವಾರ್ತೆಯ ಪುನೀತ್ ಇದ್ದರು.