<p><strong>ಮಂಗಳೂರು: </strong>ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಸಿಸಿಬಿ ಪೊಲೀಸರು ಇಬ್ಬರು ಪೆಡ್ಲರ್ಗಳನ್ನು ವಶಕ್ಕೆ ಪಡೆದಿದ್ದಾರೆ.</p>.<p>ವಶದಲ್ಲಿರುವ ಪೆಡ್ಲರ್ಗಳು ಬೆಂಗಳೂರಿನ ಕೆಂಗೇರಿ ನಿವಾಸಿ ಶಾಮ್, ನೈಜೀರಿಯಾ ಪ್ರಜೆ ಎಂದು ತಿಳಿದು ಬಂದಿದೆ. ಇವರು ಡ್ಯಾನ್ಸರ್ ಕಿಶೋರ್ ಶೆಟ್ಟಿ ಹಾಗೂ ಅಕೀಲ್ ನೌಶೀಲ್ಗೆ ಮುಂಬೈ, ಗೋವಾದಿಂದ ಡ್ರಗ್ಸ್ ಪೂರೈಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.</p>.<p>ಮಂಗಳೂರಿನಲ್ಲಿ ನಡೆಯುವ ಪಾರ್ಟಿಗಳಿಗೆ ಈ ಪೆಡ್ಲರ್ಗಳು ಎಂಡಿಎಂಎ, ಎಲ್ಎಸ್ಡಿ ಸೇರಿದಂತೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಸಿಸಿಬಿ ಪೊಲೀಸರು 8 ಜನರನ್ನು ಬಂಧಿಸಿದ್ದಾರೆ.</p>.<p><strong>25 ಕೆ.ಜಿ. ಗಾಂಜಾ ವಶ:</strong>ಮಂಗಳೂರಿನಿಂದ ಕಾರಿನಲ್ಲಿ ಸಾಗಿಸುತ್ತಿದ್ದ 25 ಕೆ.ಜಿ. ಗಾಂಜಾವನ್ನು ಕಾಸರಗೋಡು ಜಿಲ್ಲೆಯ ನೀಲೇಶ್ವರ ಅಬಕಾರಿ ದಳದ ಸಿಬ್ಬಂದಿ ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ.</p>.<p>ಕಾಸರಗೋಡು ಅಣಂಗೂರಿನ ಅಬ್ದುಲ್ ಸಮದ್, ಉದುಮ ಪಳ್ಳಿಕೆರೆ ಕಲ್ಲಿಂಗಾಲ್ನ ರಫೀಕ್ ಬಂಧಿತರು. ಕಾರನ್ನು ತಪಾಸಣೆ ಮಾಡಿದಾಗ ಗಾಂಜಾ ಪತ್ತೆಯಾಗಿದ್ದು, ಇದನ್ನು ಮಂಗಳೂರಿನಿಂದ ತಂದಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಸಿಸಿಬಿ ಪೊಲೀಸರು ಇಬ್ಬರು ಪೆಡ್ಲರ್ಗಳನ್ನು ವಶಕ್ಕೆ ಪಡೆದಿದ್ದಾರೆ.</p>.<p>ವಶದಲ್ಲಿರುವ ಪೆಡ್ಲರ್ಗಳು ಬೆಂಗಳೂರಿನ ಕೆಂಗೇರಿ ನಿವಾಸಿ ಶಾಮ್, ನೈಜೀರಿಯಾ ಪ್ರಜೆ ಎಂದು ತಿಳಿದು ಬಂದಿದೆ. ಇವರು ಡ್ಯಾನ್ಸರ್ ಕಿಶೋರ್ ಶೆಟ್ಟಿ ಹಾಗೂ ಅಕೀಲ್ ನೌಶೀಲ್ಗೆ ಮುಂಬೈ, ಗೋವಾದಿಂದ ಡ್ರಗ್ಸ್ ಪೂರೈಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.</p>.<p>ಮಂಗಳೂರಿನಲ್ಲಿ ನಡೆಯುವ ಪಾರ್ಟಿಗಳಿಗೆ ಈ ಪೆಡ್ಲರ್ಗಳು ಎಂಡಿಎಂಎ, ಎಲ್ಎಸ್ಡಿ ಸೇರಿದಂತೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಸಿಸಿಬಿ ಪೊಲೀಸರು 8 ಜನರನ್ನು ಬಂಧಿಸಿದ್ದಾರೆ.</p>.<p><strong>25 ಕೆ.ಜಿ. ಗಾಂಜಾ ವಶ:</strong>ಮಂಗಳೂರಿನಿಂದ ಕಾರಿನಲ್ಲಿ ಸಾಗಿಸುತ್ತಿದ್ದ 25 ಕೆ.ಜಿ. ಗಾಂಜಾವನ್ನು ಕಾಸರಗೋಡು ಜಿಲ್ಲೆಯ ನೀಲೇಶ್ವರ ಅಬಕಾರಿ ದಳದ ಸಿಬ್ಬಂದಿ ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ.</p>.<p>ಕಾಸರಗೋಡು ಅಣಂಗೂರಿನ ಅಬ್ದುಲ್ ಸಮದ್, ಉದುಮ ಪಳ್ಳಿಕೆರೆ ಕಲ್ಲಿಂಗಾಲ್ನ ರಫೀಕ್ ಬಂಧಿತರು. ಕಾರನ್ನು ತಪಾಸಣೆ ಮಾಡಿದಾಗ ಗಾಂಜಾ ಪತ್ತೆಯಾಗಿದ್ದು, ಇದನ್ನು ಮಂಗಳೂರಿನಿಂದ ತಂದಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>