ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್‌ ಮೇಲೆ ಮರ ಬಿದ್ದು ಇಬ್ಬರ ಸಾವು

Last Updated 4 ಮೇ 2019, 13:00 IST
ಅಕ್ಷರ ಗಾತ್ರ

ಮಂಗಳೂರು: ಉಜಿರೆ ಸಿದ್ಧವನ ಗುರುಕುಲ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್‌ ಮರವೊಂದು ಕಾರಿನ ಮೇಲೆ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ.

ಉಜಿರೆಯ ನಿನ್ನಿಕಲ್ಲು ನಿವಾಸಿ ವಿಘ್ನೇಶ್‌ (21) ಸ್ಥಳದಲ್ಲಿಯೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮಡಂತ್ಯಾರಿನ ಕ್ಷಿತಿಜ್‌ ಜೈನ್‌ (24) ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ.

ಸ್ನೇಹಿತರು ಸೇರಿ ಧರ್ಮಸ್ಥಳದಿಂದ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಕಾರಿನ ಮುಂಭಾಗದಲ್ಲಿ ಏರ್‌ ಬ್ಯಾಗ್‌ ತೆರೆದುಕೊಂಡಿದ್ದರಿಂದ ಮುಂದೆ ಕುಳಿತಿದ್ದ ಇಬ್ಬರಿಗೆ ಯಾವುದೇ ಅಪಾಯ ಆಗಿಲ್ಲ. ಹಿಂಭಾಗದಲ್ಲಿ ಕುಳಿತಿದ್ದ ಇಬ್ಬರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT