ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುತ್ತೂರು: ಮಣ್ಣಿನಡಿ ಸಿಲುಕಿದ ಇಬ್ಬರು ಕಾರ್ಮಿಕರು

ಒಬ್ಬನ ಮೃತದೇಹ ಪತ್ತೆ: ಇನ್ನೊಬ್ಬರಿಗೆ ಶೋಧ
Last Updated 4 ಮಾರ್ಚ್ 2021, 7:23 IST
ಅಕ್ಷರ ಗಾತ್ರ

ಪುತ್ತೂರು: ಜೆಸಿಬಿಯಲ್ಲಿ ಮಣ್ಣು ಅಗೆಯುವ ವೇಳೆ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ಗುರುವಾರ ಬೆಳಿಗ್ಗೆ ಪಾಣಾಜೆ ಗ್ರಾಮದ‌ ಕೋಟೆ ರಸ್ತೆಯ ಕೆಮಾಜೆಯಲ್ಲಿ‌ ನಡೆದಿದೆ.

ಕೋಳಿ ತ್ಯಾಜ್ಯ ಹಾಕುತ್ತಿದ್ದ ಗುಂಡಿಯ ಪೈಪ್ ಸರಿಪಡಿಸಲು ಇಳಿದಿದ್ದಾಗ, ಪೈಪ್ ಮುರಿದು ಬಿದ್ದು ಇಬ್ಬರು ಕಾರ್ಮಿಕರು ಹೊಂಡಕ್ಕೆ ಬಿದ್ದಿದ್ದರು. ಇದೇ ವೇಳೆ ಪಕ್ಕದಲ್ಲಿಯೇ ಜೆಸಿಬಿ ಮಣ್ಣು ಅಗೆಯುತ್ತಿದ್ದುದರಿಂದ ಮಣ್ಣು ಕುಸಿದು ಹೊಂಡದೊಳಗಿದ್ದ ಕಾರ್ಮಿಕರ ಮೇಲೆ ಬಿದ್ದಿದೆ.

ಕೂಲಿ ಕಾರ್ಮಿಕರಾದ ಸ್ಥಳೀಯ ನಿವಾಸಿಗಳಾದ ರವಿ ಮತ್ತು ಬಾಬು ಮಣ್ಣಿನಡಿ ಸಿಲುಕಿ ಹಾಕಿಕೊಂಡವರು. ಇಬ್ಬರಿಗೆ ಸುಮಾರು 35-40 ವರ್ಷದವರು ಎಂದು ತಿಳಿದು ಬಂದಿದೆ‌. ಇದರಲ್ಲಿ ಒಬ್ಬರ ಮೃತ ದೇಹವನ್ನು ಮೇಲಕ್ಕೆ ಎತ್ತಲಾಗಿದ್ದು, ಇನ್ನೊಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT