<p><strong>ಮಂಗಳೂರು</strong>: ಸುರತ್ಕಲ್ ಲೈಟ್ಹೌಸ್ನಿಂದ 42 ನಾಟಿಕಲ್ ಮೈಲಿ ದೂರದ ಅರಬ್ಬಿ ಸಮುದ್ರದಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಬೋಟ್ ಅಪಘಾತದಲ್ಲಿ ನಾಪತ್ತೆಯಾಗಿರುವ ಒಂಬತ್ತು ಮೀನುಗಾರರು ಪೈಕಿ, ಮತ್ತಿಬ್ಬರ ಶವ ಶುಕ್ರವಾರ ಪತ್ತೆಯಾಗಿವೆ. ಇನ್ನು 7 ಜನರಿಗೆ ಶೋಧ ಮುಂದುವರಿಸಿದೆ.</p>.<p>ನೌಕಾಪಡೆಯ ‘ಐಎನ್ಎಸ್ ನಿರೀಕ್ಷಕ್’ ಹಡಗಿನಲ್ಲಿ ಕಾರ್ಯಾಚರಣೆ ಮಾಡುವಾಗ ಎರಡು ಮೃತದೇಹಗಳು ಸಿಕ್ಕಿವೆ. ತಕ್ಷಣ ಎನ್ಎಂಪಿಟಿ ಬಂದರಿಗೆ ತಂದಿದ್ದು, ಕರಾವಳಿ ಕಾವಲು ಪೊಲೀಸ್ ಪಡೆಗೆ ಹಸ್ತಾಂತರ ಮಾಡಲಾಗಿದೆ. ನಾಲ್ಕು ದಿನಗಳಿಂದ ಈ ಮೃತದೇಹಗಳು ನೀರಿನಲ್ಲಿದ್ದ ಕಾರಣ ಗುರುತು ಪತ್ತೆ ಕಷ್ಟಕರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಕರಾವಳಿ ಕಾವಲು ಪಡೆ, ಕರಾವಳಿ ಕಾವಲು ಪೊಲೀಸ್ ಪಡೆ, ಕಾರವಾರದ ನೌಕಾನೆಲೆಯ ಹಡಗು, ಹೆಲಿಕಾಪ್ಟರ್ ಮೂಲಕ ಶೋಧ ಮಾಡಲಾಗುತ್ತಿದೆ. ಕೇರಳದ ನಾಲ್ಕೈದು ಬೋಟ್ಗಳು ನಿರಂತರ ಶೋಧ ಕಾರ್ಯ ನಡೆಸಿವೆ. ನಾಲ್ಕು ದಿನಗಳಿಂದ ನಿರಂತರ ಹುಡುಕಾಟ ನಡೆಸಿದರೂ ಮೀನುಗಾರರ ಪತ್ತೆಯಾಗಿರಲಿಲ್ಲ.</p>.<p>ನಾಪತ್ತೆಯಾದ ಮೀನುಗಾರರ ಕುಟುಂಬದ ಸದಸ್ಯರು ಮಂಗಳೂರು ಕಡೆಗೆ ಪ್ರಯಾಣ ಬೆಳೆಸಿದ್ದು, ನಾಪತ್ತೆಯಾದವರ ಕುರಿತು ಮತ್ತಷ್ಟು ವಿವರಗಳನ್ನು ಪಡೆಯಲು ಪ್ರಯತ್ನಿಸಲಾಗುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಸುರತ್ಕಲ್ ಲೈಟ್ಹೌಸ್ನಿಂದ 42 ನಾಟಿಕಲ್ ಮೈಲಿ ದೂರದ ಅರಬ್ಬಿ ಸಮುದ್ರದಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಬೋಟ್ ಅಪಘಾತದಲ್ಲಿ ನಾಪತ್ತೆಯಾಗಿರುವ ಒಂಬತ್ತು ಮೀನುಗಾರರು ಪೈಕಿ, ಮತ್ತಿಬ್ಬರ ಶವ ಶುಕ್ರವಾರ ಪತ್ತೆಯಾಗಿವೆ. ಇನ್ನು 7 ಜನರಿಗೆ ಶೋಧ ಮುಂದುವರಿಸಿದೆ.</p>.<p>ನೌಕಾಪಡೆಯ ‘ಐಎನ್ಎಸ್ ನಿರೀಕ್ಷಕ್’ ಹಡಗಿನಲ್ಲಿ ಕಾರ್ಯಾಚರಣೆ ಮಾಡುವಾಗ ಎರಡು ಮೃತದೇಹಗಳು ಸಿಕ್ಕಿವೆ. ತಕ್ಷಣ ಎನ್ಎಂಪಿಟಿ ಬಂದರಿಗೆ ತಂದಿದ್ದು, ಕರಾವಳಿ ಕಾವಲು ಪೊಲೀಸ್ ಪಡೆಗೆ ಹಸ್ತಾಂತರ ಮಾಡಲಾಗಿದೆ. ನಾಲ್ಕು ದಿನಗಳಿಂದ ಈ ಮೃತದೇಹಗಳು ನೀರಿನಲ್ಲಿದ್ದ ಕಾರಣ ಗುರುತು ಪತ್ತೆ ಕಷ್ಟಕರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಕರಾವಳಿ ಕಾವಲು ಪಡೆ, ಕರಾವಳಿ ಕಾವಲು ಪೊಲೀಸ್ ಪಡೆ, ಕಾರವಾರದ ನೌಕಾನೆಲೆಯ ಹಡಗು, ಹೆಲಿಕಾಪ್ಟರ್ ಮೂಲಕ ಶೋಧ ಮಾಡಲಾಗುತ್ತಿದೆ. ಕೇರಳದ ನಾಲ್ಕೈದು ಬೋಟ್ಗಳು ನಿರಂತರ ಶೋಧ ಕಾರ್ಯ ನಡೆಸಿವೆ. ನಾಲ್ಕು ದಿನಗಳಿಂದ ನಿರಂತರ ಹುಡುಕಾಟ ನಡೆಸಿದರೂ ಮೀನುಗಾರರ ಪತ್ತೆಯಾಗಿರಲಿಲ್ಲ.</p>.<p>ನಾಪತ್ತೆಯಾದ ಮೀನುಗಾರರ ಕುಟುಂಬದ ಸದಸ್ಯರು ಮಂಗಳೂರು ಕಡೆಗೆ ಪ್ರಯಾಣ ಬೆಳೆಸಿದ್ದು, ನಾಪತ್ತೆಯಾದವರ ಕುರಿತು ಮತ್ತಷ್ಟು ವಿವರಗಳನ್ನು ಪಡೆಯಲು ಪ್ರಯತ್ನಿಸಲಾಗುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>