ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುರತ್ಕಲ್‌ನ ಮತೀಯ ಗೂಂಡಾ‌ಗಿರಿ: ಆರು ಜನರ ಬಂಧನ

Last Updated 16 ನವೆಂಬರ್ 2021, 7:09 IST
ಅಕ್ಷರ ಗಾತ್ರ

ಮಂಗಳೂರು: ನಗರದ ಸುರತ್ಕಲ್‌ನಲ್ಲಿ ಮತೀಯ ಗೂಂಡಾಗಿರಿ ನಡೆಸಿದ ಆರು ಜನ ಆರೋಪಿಗಳನ್ನು ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ. ಪ್ರಹ್ಲಾದ್, ಪ್ರಶಾಂತ್, ಗುರುಪ್ರಸಾದ್, ಪ್ರತೀಶ್, ಭರತ್, ಸುಖೇಶ್ ಬಂಧಿತ‌ ಆರೋಪಿಗಳು.

ಭಿನ್ನ ಕೋಮಿನ ಯುವತಿಯೊಂದಿಗೆ ಬೈಕ್‌ನಲ್ಲಿ ಹೋಗುತ್ತಿದ್ದಯುವಕನೊಬ್ಬನನ್ನು ಬೆನ್ನಟ್ಟಿದ ಅರೋಪಿಗಳು ಹಲ್ಲೆನಡೆಸಿ, ಅವಾಚ್ಯ ‌ಶಬ್ದಗಳಿಂದ ನಿಂದಿಸಿದ್ದಾರೆ.

ಯುವತಿ ಅಪಾರ್ಟ್‌ಮೆಂಟ್ ಖಾಲಿ ಮಾಡುತ್ತಿದ್ದುದರಿಂದ ಲಗೇಜ್ ಶಿಫ್ಟ್ ಮಾಡಿ ಯುವಕ, ಯುವತಿಯನ್ನು ಕರೆದುಕೊಂಡು ಹೋಗುತ್ತಿದ್ದ. ಈ ವೇಳೆ ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದಯುವಕರ ತಂಡ ಯುವಕನಿಗೆ ಥಳಿಸಿದೆ. ಈ ಬಗ್ಗೆ ಯುವಕ ಸುರತ್ಕಲ್ ಠಾಣೆಗೆ ದೂರು ನೀಡಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಭೇಟಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT