ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು | ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ನಂತೂರು: ರಸ್ತೆಗೆ ಬಿದ್ದ ಸವಾರರ ಮೇಲೆ ಹಾದುಹೋದ ಟಿಪ್ಪರ್ ಚಕ್ರ
Last Updated 19 ಮಾರ್ಚ್ 2023, 7:12 IST
ಅಕ್ಷರ ಗಾತ್ರ

ಮಂಗಳೂರು: ಇಲ್ಲಿನ‌ ನಂತೂರು ವೃತ್ತದಲ್ಲಿ ಶನಿವಾರ ಮಧ್ಯಾಹ್ನ ‌ಟಿಪ್ಪರ್ ನಡಿ ಸ್ಕೂಟರ್ ಸಿಲುಕಿ ಸಂಭವಿಸಿದ ಅಪಘಾತದಲ್ಲಿ ಬಾಲಕಿ ಸೇರಿ ಇಬ್ಬರು ಮೃತಪಟ್ಟಿದ್ದಾರೆ.

ಸ್ಕೂಟರ್ ಸವಾರ, ನಗರದ ಸುಲ್ತಾನ್ ಬತ್ತೇರಿಯ ಸ್ಯಾಮ್ಯುಯೆಲ್ ಜೇಸುದಾಸ್ (66) ಹಾಗೂ ಅವರ‌ ಸೊಸೆ ಶ್ರುತಿಯವರ ದೊಡ್ಡಮ್ಮನ ಮಗಳು, ಕುಂಪಲದ ಭೂಮಿಕಾ (17) ಮೃತರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಥಮ ಪಿ.ಯು. ವಿದ್ಯಾರ್ಥಿನಿ ಭೂಮಿಕಾ ಅವರನ್ನು ಅವರ ಕುಂಪಲದ ಮನೆಯಿಂದ ಸ್ಯಾಮ್ಯುಯೆಲ್ ಅವರು ಸುಲ್ತಾನ್ ಬತ್ತೇರಿಯಲ್ಲಿರುವ ತಮ್ಮ ಮನೆಗೆ ಸ್ಕೂಟರ್‌ನಲ್ಲಿ ಕರೆದೊಯ್ಯುವಾಗ ದುರ್ಘಟನೆ ಸಂಭವಿಸಿದೆ.

‘ಸ್ಕೂಟರ್ ಹಾಗೂ ಟಿಪ್ಪರ್‌ಗಳೆರಡೂ ಪಂಪ್‌ವೆಲ್‌ನಿಂದ ಕೆಪಿಟಿ ಕಡೆಗೆ ಸಂಚರಿಸುತ್ತಿದ್ದವು. ನಂತೂರು ವೃತ್ತ ಬಳಿ ಸಾಗುವಾಗ ಟಿಪ್ಪರ್ ಸ್ಕೂಟರ್‌ಗೆ ಡಿಕ್ಕಿಯಾಗಿತ್ತು. ರಸ್ತೆ ಬಿದ್ದ ಸವಾರರ ಮೇಲೆಯೇ ಟಿಪ್ಪರ್ ಚಕ್ರ ಹಾದು ಹೋಗಿತ್ತು. ಸ್ಕೂಟರ್‌ ಅನ್ನು ಕೂಡ ಕೆಲ ದೂರ ಟಿಪ್ಪರ್‌ ಎಳೆದೊಯ್ದಿತ್ತು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆಕ್ರೋಶಗೊಂಡ ಸ್ಥಳೀಯರು ಟಿಪ್ಪರ್‌ಗೆ ಕಲ್ಲು ತೂರಿದ್ದು, ಗಾಜುಗಳು ಪುಡಿಯಾಗಿವೆ. ಪೊಲೀಸರು ಟಿಪ್ಪರ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಧಾವಿಸಿದ ಸಹಾಯಕ ಪೊಲೀಸ್ ಕಮಿಷನರ್ ಗೀತಾ ಕುಲಕರ್ಣಿ ಹಾಗೂ ಇತರ ಪೊಲೀಸ್ ಅಧಿಕಾರಿಗಳ ಜೊತೆಗೂ ಸಾರ್ವಜನಿಕರು ಮಾತಿನ ಚಕಮಕಿ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT